BREAKING NEWS

ಕೆಸಿಆರ್‌ ರಿಮೋಟ್‌ ಕಂಟ್ರೋಲ್‌ ಮೋದಿ ಬಳಿಯಿದೆ : ರಾಹುಲ್‌ ಗಾಂಧಿ

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್‌ ಕಂಟ್ರೋಲ್‌ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ ಟೀಂ ಆಡಳಿತ ನಡೆಸುತ್ತಿದೆ, ಬಿಎಆರ್‌ಎಸ್‌ ಅಂದರೆ ಬಿಜೆಪಿ ರಿಷ್ಟೇದಾರ್ ಸಮಿತಿ ಹೇಳುವ ಮೂಲಕ ವ್ಯಂಗ್ಯವಾಡಿದರು.

ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೋರಾಡಿ ಜಯಗಳಿಸಿದೆ. ತೆಲಂಗಾಣದಲ್ಲಿ ಒಂದು ಬದಿ ರಾಜ್ಯದ ಶ್ರೀಮಂತರು, ಶಕ್ತಿಯುತರು ಇದ್ದರೆ, ಇನ್ನೊಂದು ಬದಿಯಲ್ಲಿ ನಮ್ಮೊಂದಿಗೆ ಬಡವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಯವರು ಇದ್ದಾರೆ. ಕರ್ನಾಟಕದ ಫಲಿತಾಂಶ, ತೆಲಂಗಾಣದಲ್ಲಿ ಪುನರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿದರು.

ತೆಲಂಗಾಣದಲ್ಲಿ ಬಿಜೆಪಿ ಅಸ್ತಿತ್ವದಲ್ಲಿಲ್ಲ. ಅವರ ಎಲ್ಲಾ ನಾಲ್ಕು ಟಯರ್‌ಗಳು ಪಂಕ್ಚರ್ ಆಗಿವೆ. ಈಗ ಇದು ಕಾಂಗ್ರೆಸ್ ಮತ್ತು ಬಿಜೆಪಿಯ ಬಿ-ಟೀಮ್ ನಡುವೆ ನಡೆಯುವ ಜಗಳವಾಗಿದೆ. ಕಾಂಗ್ರೆಸ್ ಟಿಆರ್‌ಎಸ್‌ನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ. ಟಿಆರ್‌ಎಸ್ ಸಭೆಯಲ್ಲಿ ಭಾಗವಹಿಸದಂತೆ ನಾವು ಇತರ ಪಕ್ಷಗಳ ನಾಯಕರಿಗೆ ಹೇಳಿದ್ದೇವೆ ಎಂದರು.

lokesh

Recent Posts

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

40 mins ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

57 mins ago

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

1 hour ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

1 hour ago

ಗಣರಾಜ್ಯೋತ್ಸವ | ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

2 hours ago

ಮೈಸೂರು | ಧ್ವಜಾರೋಹಣ ನೆರವೇರಿಸಿದ ಸಚಿವ ಮಹದೇವಪ್ಪ : ಸಂವಿಧಾನ ರಕ್ಷಿಸಲು ಕರೆ

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…

2 hours ago