BREAKING NEWS

ಕೆಸಿಆರ್‌ ರಿಮೋಟ್‌ ಕಂಟ್ರೋಲ್‌ ಮೋದಿ ಬಳಿಯಿದೆ : ರಾಹುಲ್‌ ಗಾಂಧಿ

ಹೈದರಾಬಾದ್‌ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್‌ ಕಂಟ್ರೋಲ್‌ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ ಟೀಂ ಆಡಳಿತ ನಡೆಸುತ್ತಿದೆ, ಬಿಎಆರ್‌ಎಸ್‌ ಅಂದರೆ ಬಿಜೆಪಿ ರಿಷ್ಟೇದಾರ್ ಸಮಿತಿ ಹೇಳುವ ಮೂಲಕ ವ್ಯಂಗ್ಯವಾಡಿದರು.

ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೋರಾಡಿ ಜಯಗಳಿಸಿದೆ. ತೆಲಂಗಾಣದಲ್ಲಿ ಒಂದು ಬದಿ ರಾಜ್ಯದ ಶ್ರೀಮಂತರು, ಶಕ್ತಿಯುತರು ಇದ್ದರೆ, ಇನ್ನೊಂದು ಬದಿಯಲ್ಲಿ ನಮ್ಮೊಂದಿಗೆ ಬಡವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಯವರು ಇದ್ದಾರೆ. ಕರ್ನಾಟಕದ ಫಲಿತಾಂಶ, ತೆಲಂಗಾಣದಲ್ಲಿ ಪುನರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿದರು.

ತೆಲಂಗಾಣದಲ್ಲಿ ಬಿಜೆಪಿ ಅಸ್ತಿತ್ವದಲ್ಲಿಲ್ಲ. ಅವರ ಎಲ್ಲಾ ನಾಲ್ಕು ಟಯರ್‌ಗಳು ಪಂಕ್ಚರ್ ಆಗಿವೆ. ಈಗ ಇದು ಕಾಂಗ್ರೆಸ್ ಮತ್ತು ಬಿಜೆಪಿಯ ಬಿ-ಟೀಮ್ ನಡುವೆ ನಡೆಯುವ ಜಗಳವಾಗಿದೆ. ಕಾಂಗ್ರೆಸ್ ಟಿಆರ್‌ಎಸ್‌ನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ. ಟಿಆರ್‌ಎಸ್ ಸಭೆಯಲ್ಲಿ ಭಾಗವಹಿಸದಂತೆ ನಾವು ಇತರ ಪಕ್ಷಗಳ ನಾಯಕರಿಗೆ ಹೇಳಿದ್ದೇವೆ ಎಂದರು.

lokesh

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

1 hour ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

2 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

3 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

3 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

4 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

11 hours ago