ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ರಿಮೋಟ್ ಕಂಟ್ರೋಲ್ ನರೇಂದ್ರ ಮೋದಿ ಅವರ ಬಳಿಯಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಖಮ್ಮಂನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯ ಬಿ ಟೀಂ ಆಡಳಿತ ನಡೆಸುತ್ತಿದೆ, ಬಿಎಆರ್ಎಸ್ ಅಂದರೆ ಬಿಜೆಪಿ ರಿಷ್ಟೇದಾರ್ ಸಮಿತಿ ಹೇಳುವ ಮೂಲಕ ವ್ಯಂಗ್ಯವಾಡಿದರು.
ಭ್ರಷ್ಟ ಮತ್ತು ಬಡವರ ವಿರೋಧಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇತ್ತೀಚೆಗೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಹೋರಾಡಿ ಜಯಗಳಿಸಿದೆ. ತೆಲಂಗಾಣದಲ್ಲಿ ಒಂದು ಬದಿ ರಾಜ್ಯದ ಶ್ರೀಮಂತರು, ಶಕ್ತಿಯುತರು ಇದ್ದರೆ, ಇನ್ನೊಂದು ಬದಿಯಲ್ಲಿ ನಮ್ಮೊಂದಿಗೆ ಬಡವರು, ಬುಡಕಟ್ಟುಗಳು, ಅಲ್ಪಸಂಖ್ಯಾತರು, ರೈತರು ಮತ್ತು ಸಣ್ಣ ಅಂಗಡಿಯವರು ಇದ್ದಾರೆ. ಕರ್ನಾಟಕದ ಫಲಿತಾಂಶ, ತೆಲಂಗಾಣದಲ್ಲಿ ಪುನರಾವರ್ತನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿದರು.
ತೆಲಂಗಾಣದಲ್ಲಿ ಬಿಜೆಪಿ ಅಸ್ತಿತ್ವದಲ್ಲಿಲ್ಲ. ಅವರ ಎಲ್ಲಾ ನಾಲ್ಕು ಟಯರ್ಗಳು ಪಂಕ್ಚರ್ ಆಗಿವೆ. ಈಗ ಇದು ಕಾಂಗ್ರೆಸ್ ಮತ್ತು ಬಿಜೆಪಿಯ ಬಿ-ಟೀಮ್ ನಡುವೆ ನಡೆಯುವ ಜಗಳವಾಗಿದೆ. ಕಾಂಗ್ರೆಸ್ ಟಿಆರ್ಎಸ್ನೊಂದಿಗೆ ವೇದಿಕೆ ಹಂಚಿಕೊಳ್ಳಲು ಸಾಧ್ಯವಿಲ್ಲ. ಟಿಆರ್ಎಸ್ ಸಭೆಯಲ್ಲಿ ಭಾಗವಹಿಸದಂತೆ ನಾವು ಇತರ ಪಕ್ಷಗಳ ನಾಯಕರಿಗೆ ಹೇಳಿದ್ದೇವೆ ಎಂದರು.
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…
ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…
ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ…
ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…
ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…