ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಪ್ರಕರಣದಲ್ಲಿನ ಆರೋಪಿ ಆರ್.ಡಿ. ಪಾಟೀಲ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂರು ದಿನಗಳ ಹಿಂದೆ ಕಲಬುರಗಿಯ ವಾರ್ದಾ ಅಪಾರ್ಟ್ಮೆಂಟ್ ಒಂದರ ಗೋಡೆ ಹಾರಿ ಪರಾರಿಯಾಗಿದ್ದ ಆರೋಪಿಯನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಕಲಬುರಗಿ ಗೆ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಗೌಪ್ಯ ಜಾಗದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ.10 ರಂದು ಜಾಮೀನು ಅರ್ಜಿ ವಿಚಾರಣೆಗೊಳಪಡಿಸಿ, ವಿಚಾರಣೆಯನ್ನು ಮುಂದಕ್ಕೆ ಹಾಕಿತ್ತು. ಗೌಪ್ಯ ಸ್ಥಳ ಭೇದಿಸಿದ ಪೊಲೀಸರು ಆರ್.ಡಿ ಪಾಟೀಲ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅ.29 ರಂದು ನಡೆಸಲಾಗಿದ್ದ ಕೆಇಎ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಬ್ಲೂಟೂತ್ ಬಳಿ ಉತ್ತರ ಬೆರಯುವಾಗ ಸಿಕ್ಕಿಬಿದ್ದಿದ್ದು, ಅದೊಂದು ದೊಡ್ಡ ಜಾಲವನ್ನೇ ಬಹಿರಂಗಪಡಿಸಿತ್ತು. ಈ ಜಾಲದ ಮುಖ್ಯ ರುವಾರಿ ಆರ್.ಟಿ.ಪಾಟೀಲ್ ಎಂಬುದು ಖಚಿತವಾಯಿತು. ಈ ಆರೋಪಿ ಪಿಎಸ್ಐ ಹಗರಣದಲ್ಲಿಯೂ ಶಾಮೀಲಾಗಿದ್ದು ಜಾಮೀನಿನ ಮೇಲೆ ಹೊರ ಬಂದಿದ್ದ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…