ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಪ್ರಕರಣದಲ್ಲಿನ ಆರೋಪಿ ಆರ್.ಡಿ. ಪಾಟೀಲ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೂರು ದಿನಗಳ ಹಿಂದೆ ಕಲಬುರಗಿಯ ವಾರ್ದಾ ಅಪಾರ್ಟ್ಮೆಂಟ್ ಒಂದರ ಗೋಡೆ ಹಾರಿ ಪರಾರಿಯಾಗಿದ್ದ ಆರೋಪಿಯನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ ಕಲಬುರಗಿ ಗೆ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಗೌಪ್ಯ ಜಾಗದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನ.10 ರಂದು ಜಾಮೀನು ಅರ್ಜಿ ವಿಚಾರಣೆಗೊಳಪಡಿಸಿ, ವಿಚಾರಣೆಯನ್ನು ಮುಂದಕ್ಕೆ ಹಾಕಿತ್ತು. ಗೌಪ್ಯ ಸ್ಥಳ ಭೇದಿಸಿದ ಪೊಲೀಸರು ಆರ್.ಡಿ ಪಾಟೀಲ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅ.29 ರಂದು ನಡೆಸಲಾಗಿದ್ದ ಕೆಇಎ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಯಲ್ಲಿ ಕೆಲವು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಬ್ಲೂಟೂತ್ ಬಳಿ ಉತ್ತರ ಬೆರಯುವಾಗ ಸಿಕ್ಕಿಬಿದ್ದಿದ್ದು, ಅದೊಂದು ದೊಡ್ಡ ಜಾಲವನ್ನೇ ಬಹಿರಂಗಪಡಿಸಿತ್ತು. ಈ ಜಾಲದ ಮುಖ್ಯ ರುವಾರಿ ಆರ್.ಟಿ.ಪಾಟೀಲ್ ಎಂಬುದು ಖಚಿತವಾಯಿತು. ಈ ಆರೋಪಿ ಪಿಎಸ್ಐ ಹಗರಣದಲ್ಲಿಯೂ ಶಾಮೀಲಾಗಿದ್ದು ಜಾಮೀನಿನ ಮೇಲೆ ಹೊರ ಬಂದಿದ್ದ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…