BREAKING NEWS

25ರಿಂದ ಕೇದಾರನಾಥ ಯಾತ್ರೆ ಆರಂಭ: ಟೋಕನ್‌ ವ್ಯವಸ್ಥೆ ಜಾರಿ

ರುದ್ರಪ್ರಯಾಗ್: ಕೇದಾರನಾಥ ಯಾತ್ರೆ ಇದೇ 25ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ದಿನವೊಂದಕ್ಕೆ 13 ಸಾವಿರ ಯಾತ್ರಿಕರ ಭೇಟಿಗಷ್ಟೇ ಅನುಮತಿ ನೀಡಲಾಗಿದೆ.

‘ಸರ್ಕಾರ ಈ ಬಾರಿ ಯಾತ್ರಾರ್ಥಿಗಳಿಗೆ ಟೋಕನ್‌ ವ್ಯವಸ್ಥೆಯನ್ನೂ ಪರಿಚಯಿಸಿದೆ. ಸುಗಮ ಯಾತ್ರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ರುದ್ರಪ್ರಯಾಗ್‌ ಜಿಲ್ಲಾಧಿಕಾರಿ ಮಯೂರ್‌ ದೀಕ್ಷಿತ್‌ ಸುದ್ದಿಗಾರರಿಗೆ ತಿಳಿಸಿದರು.

ಯಾತ್ರಿಕರ ಆರೋಗ್ಯದ ಸುರಕ್ಷತೆಗೆ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿದೆ. 22 ವೈದ್ಯರು ಸೇರಿದಂತೆ ಅಷ್ಟೇ ಸಂಖ್ಯೆಯ ಅರೆವೈದ್ಯಕೀಯ ಸಿಬ್ಬಂದಿಯನ್ನು ಯಾತ್ರಾ ಮಾರ್ಗದಲ್ಲಿ ನಿಯೋಜಿಸಲಾಗಿದೆ. 12 ವೈದ್ಯಕೀಯ ಶಿಬಿರ ತೆರೆಯಲಾಗಿದೆ. ಆರು ಆಂಬುಲೆನ್ಸ್‌ಗಳು ಕಾರ್ಯ ನಿರ್ವಹಿಸಲಿವೆ. ತುರ್ತು ನೆರವಿಗಾಗಿ ಏರ್‌ ಆಂಬುಲೆನ್ಸ್‌ ಸೇವೆಗೂ ಸರ್ಕಾರ ಅನುಮತಿ ನೀಡಿದೆ ಎಂದು ವಿವರಿಸಿದರು.

ಸುಲಭ್‌ ಇಂಟರ್‌ನ್ಯಾಷನಲ್‌ ಯಾತ್ರಾ ಮಾರ್ಗದ ಸ್ವಚ್ಛತೆಯ ಹೊಣೆ ಹೊತ್ತಿದೆ. ಕೇದಾರನಾಥ ನಗರ ಪಂಚಾಯಿತಿಯಿಂದ ದೇಗುಲದ ಆವರಣ, ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತಾ ನಿರ್ವಹಣೆ ನಡೆಯಲಿದೆ. ಯಾತ್ರಾರ್ಥಿಗಳಿಗೆ ಅಗತ್ಯ ಕುಡಿಯುವ ನೀರು ಪೂರೈಕೆಗೂ ಕ್ರಮವಹಿಸಲಾಗಿದೆ ಎಂದರು.

‘ಭದ್ರತೆಗಾಗಿ 450 ಪೊಲೀಸರನ್ನು ನಿಯೋಜಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಶಾಖ ಅಶೋಕ್‌ ಬದಾನೆ ಮಾಹಿತಿ ನೀಡಿದರು.

lokesh

Recent Posts

ಮಹಪಂಚ್‌ ಕಾರ್ಟೂನ್‌

ಮಹಪಂಚ್‌ ಕಾರ್ಟೂನ್‌ |ಜುಲೈ 8 ಬುಧವಾರ  

3 hours ago

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

19 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

19 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

20 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

20 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

21 hours ago