BREAKING NEWS

ಕೇರಳ| ರೈಲು ಬೋಗಿಯೊಳಗೆ ಬೆಂಕಿ ಹಚ್ಚಿದ ಪ್ರಕರಣ: ತಪ್ಪೊಪ್ಪಿಕೊಂಡ ಆರೋಪಿ

ಕೋಯಿಕ್ಕೋಡ್‌: ಕೇರಳದಲ್ಲಿ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದ ಪ್ರಮುಖ ಆರೋಪಿ ಶಾರೂಕ್‌ ಸೈಫಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂ. ಆರ್. ಅಜಿತ್ ಕುಮಾರ್ ಅವರು ಸುದ್ದಿಗಾರರಿಗೆ ತಿಳಿಸಿದರು.

‘ತಾನು ಅಪರಾಧ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ನಾವು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದೇವೆ. ಇಂಥ ಪ್ರಕರಣಗಳಲ್ಲಿ ಭಾಗಿಯಾಗುವ ಆರೋಪಿಗಳು ತಮ್ಮ ಉದ್ದೇಶವನ್ನು ಸಾಮಾನ್ಯವಾಗಿ ಬಹಿರಂಗಪಡಿಸುವುದಿಲ್ಲ. ವಿಚಾರಣೆ ದೀರ್ಘ ಪ್ರಕ್ರಿಯೆ’ ಎಂದು ಕುಮಾರ್ ಹೇಳಿದರು.

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸೆರೆಸಿಕ್ಕಿದ್ದ ಆರೋಪಿಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದುಕೊಂಡಿದೆ. ಕೋಯಿಕ್ಕೋಡ್‌ ವೈದ್ಯಕೀಯ ಮಂಡಳಿಯು ಆರೋಪಿಯು ದೈಹಿಕವಾಗಿ ಸದೃಢ ಎಂದು ಘೋಷಿಸಿದ ನಂತರ ಆತನನ್ನು ಪೊಲೀಸರು ಬಂಧಿಸಿದರು.

ಘಟನೆ ನಡೆದ ಪ್ರದೇಶದಲ್ಲಿ ಹಳಿಗಳ ಮೇಲೆ ಪುಸ್ತಕ ಮತ್ತು ಪೆಟ್ರೋಲ್ ಬಾಟಲಿಯಿದ್ದ ಬ್ಯಾಗ್‌ವೊಂದು ಪತ್ತೆಯಾಗಿದ್ದು, ಅದು ಆರೋಪಿಯದ್ದೇ ಆಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದರು.

ಅಲಪ್ಪುವ – ಕಣ್ಣೂರು ಎಕ್ಸ್‌ಪ್ರೆಸ್‌ ರೈಲು ಕೋರಪುವ ಎಂಬಲ್ಲಿ ಮೇಲ್ಸೇತುವೆ ಮೇಲೆ ಚಲಿಸುತ್ತಿದ್ದ ವೇಳೆ ಆರೋಪಿ ಬೋಗಿಯೊಂದರ ಪ್ರಯಾಣಿಕರ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಇಟ್ಟಿದ್ದ. ಘಟನೆಯಲ್ಲಿ 9 ಮಂದಿ ಗಾಯಗೊಂಡರೆ, ಮೂವರು ಮೃತಪಟ್ಟಿದ್ದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

48 mins ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

3 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

3 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

3 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

3 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

3 hours ago