BREAKING NEWS

ಕೇರಳ: ಚಿಕಿತ್ಸೆ ನೀಡುವ ವೇಳೆ ವೈದ್ಯೆ ಮೇಲೆ ಕತ್ತರಿಯಿಂದ ಇರಿದು, ಹತ್ಯೆಗೈದ ವ್ಯಕ್ತಿ

ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ.

ಘಟನೆ ಹಿನ್ನೆಲೆ:  ಪುಯಪಲ್ಲಿ ಚೆರುಕರಕೋಣಂ ನಿವಾಸಿ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಸಂದೀಪ್ (42) ಎಂಬ ವ್ಯಕ್ತಿ ಪೊಲೀಸರ ತುರ್ತು ಸಂಖ್ಯೆಗೆ ʼನನ್ನನ್ನು ನನ್ನ ಕುಟುಂಬದಿಂದ ರಕ್ಷಿಸಿʼ ಎಂದು ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದ ವೇಳೆ ಕರೆ ಮಾಡಿದ್ದ ಸಂದೀಪ್‌ ಕಾಲಿಗೆ ಗಾಯ ಮಾಡಿಕೊಂಡಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ಪೊಲೀಸರು ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ವೇಳೆ 22 ವರ್ಷದ ವಂದನಾ ದಾಸ್‌ ಎಂಬ ವೈದ್ಯೆಯೊಬ್ಬರು ಸಂದೀಪ್‌ ಅವರ ಗಾಯಗೊಂಡ ಕಾಲಿಗೆ ಬ್ಯಾಂಡೇಜ್‌ ಮಾಡಲು ಹೋಗಿದ್ದಾರೆ. ಬ್ಯಾಂಡೇಜ್‌ ಮಾಡುವಾಗ ಸಂದೀಪ್‌ ಇದ್ದಕ್ಕಿದ್ದಂತೆ ಅಲ್ಲೇ ಇದ್ದ ಕತ್ತರಿ ಮತ್ತು ಒಂದು ಚಿಕ್ಕಚಾಕುವಿನಿಂದ ವೈದ್ಯೆ ಮೇಲೆ ಹಲ್ಲೆ ಮಾಡಿದ್ದಾನೆ. ಜೀವ ಭಯದಿಂದ ಗಾಯಗೊಂಡು ಹೊರಬಂದ ವೈದ್ಯೆ ಕಾಪಾಡಿ ಎಂದಿದ್ದಾರೆ. ಸಿಟ್ಟಿನಲ್ಲಿದ್ದ ಸಂದೀಪ್‌ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಮತ್ತೆ ಹಲ್ಲೆಗೈದಿದ್ದಾನೆ.

ಆಸ್ಪತ್ರೆ ಕೋಣೆ ಹೊರಗಿದ್ದ ಪೊಲೀಸರು ಆತನನ್ನು ತಡೆಯಲು ಯತ್ನಿಸಿದ್ದಾಗ ಪೊಲೀಸರ ಮೇಲೂ ಹಲ್ಲೆಗೈದು, ಆಸ್ಪತ್ರೆಯ ಕೆಲ ಸಾಮಾಗ್ರಿಗಳನ್ನು ಪುಡಿಗೈದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವೈದ್ಯೆಯನ್ನು ಹೆಚ್ಚಿನ ಚಿಕಿತ್ಸೆಗೆ ತಿರುವನಂತಪುರಂ ಆಸ್ಪತ್ರೆಗೆ ದಾಖಲು ಮಾಡಿದರೂ ಆಕೆ ಮೃತಪಟ್ಟಿದ್ದಾರೆ.

ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವೈದ್ಯೆಗೆ ಹಲ್ಲೆಗೈದು ಹತ್ಯೆ ಮಾಡಲು ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಖಂಡಿಸಿ ಕೇರಳದಲ್ಲಿ ವೈದ್ಯರು ಪ್ರತಿಭಟನೆ ನಡೆಸಿ ಬೀದಿಗೆ ಇಳಿದಿದ್ದಾರೆ.

andolanait

Recent Posts

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

5 mins ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

24 mins ago

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ…

41 mins ago

ಗುಂಡ್ಲುಪೇಟೆ-ಕೇರಳ ಹೆದ್ದಾರಿಯಲ್ಲಿ ಹೆಚ್ಚಿದ ಕಳ್ಳರ ಚೈಚಳಕ: ಅಲರ್ಟ್‌ ಆದ ಪೊಲೀಸರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕೇರಳ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಕೋರರ ಹಾವಳಿ‌‌ ಮಿತಿ ಮೀರಿರುವ ಹಿನ್ನೆಲೆಯಲ್ಲಿ ಇದಕ್ಕೆ…

47 mins ago

ಇ-ಖಾತಾ ವ್ಯವಸ್ಥೆ ಸಂಪೂರ್ಣ ಗೊಂದಲಮಯ: ಮಾಜಿ ಮೇಯರ್‌ ಶಿವಕುಮಾರ್‌ ಆರೋಪ

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ…

58 mins ago

ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ…

1 hour ago