ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ.
ಘಟನೆ ಹಿನ್ನೆಲೆ: ಪುಯಪಲ್ಲಿ ಚೆರುಕರಕೋಣಂ ನಿವಾಸಿ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಸಂದೀಪ್ (42) ಎಂಬ ವ್ಯಕ್ತಿ ಪೊಲೀಸರ ತುರ್ತು ಸಂಖ್ಯೆಗೆ ʼನನ್ನನ್ನು ನನ್ನ ಕುಟುಂಬದಿಂದ ರಕ್ಷಿಸಿʼ ಎಂದು ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದ ವೇಳೆ ಕರೆ ಮಾಡಿದ್ದ ಸಂದೀಪ್ ಕಾಲಿಗೆ ಗಾಯ ಮಾಡಿಕೊಂಡಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ಪೊಲೀಸರು ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಈ ವೇಳೆ 22 ವರ್ಷದ ವಂದನಾ ದಾಸ್ ಎಂಬ ವೈದ್ಯೆಯೊಬ್ಬರು ಸಂದೀಪ್ ಅವರ ಗಾಯಗೊಂಡ ಕಾಲಿಗೆ ಬ್ಯಾಂಡೇಜ್ ಮಾಡಲು ಹೋಗಿದ್ದಾರೆ. ಬ್ಯಾಂಡೇಜ್ ಮಾಡುವಾಗ ಸಂದೀಪ್ ಇದ್ದಕ್ಕಿದ್ದಂತೆ ಅಲ್ಲೇ ಇದ್ದ ಕತ್ತರಿ ಮತ್ತು ಒಂದು ಚಿಕ್ಕಚಾಕುವಿನಿಂದ ವೈದ್ಯೆ ಮೇಲೆ ಹಲ್ಲೆ ಮಾಡಿದ್ದಾನೆ. ಜೀವ ಭಯದಿಂದ ಗಾಯಗೊಂಡು ಹೊರಬಂದ ವೈದ್ಯೆ ಕಾಪಾಡಿ ಎಂದಿದ್ದಾರೆ. ಸಿಟ್ಟಿನಲ್ಲಿದ್ದ ಸಂದೀಪ್ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಮತ್ತೆ ಹಲ್ಲೆಗೈದಿದ್ದಾನೆ.
ಆಸ್ಪತ್ರೆ ಕೋಣೆ ಹೊರಗಿದ್ದ ಪೊಲೀಸರು ಆತನನ್ನು ತಡೆಯಲು ಯತ್ನಿಸಿದ್ದಾಗ ಪೊಲೀಸರ ಮೇಲೂ ಹಲ್ಲೆಗೈದು, ಆಸ್ಪತ್ರೆಯ ಕೆಲ ಸಾಮಾಗ್ರಿಗಳನ್ನು ಪುಡಿಗೈದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವೈದ್ಯೆಯನ್ನು ಹೆಚ್ಚಿನ ಚಿಕಿತ್ಸೆಗೆ ತಿರುವನಂತಪುರಂ ಆಸ್ಪತ್ರೆಗೆ ದಾಖಲು ಮಾಡಿದರೂ ಆಕೆ ಮೃತಪಟ್ಟಿದ್ದಾರೆ.
ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವೈದ್ಯೆಗೆ ಹಲ್ಲೆಗೈದು ಹತ್ಯೆ ಮಾಡಲು ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಖಂಡಿಸಿ ಕೇರಳದಲ್ಲಿ ವೈದ್ಯರು ಪ್ರತಿಭಟನೆ ನಡೆಸಿ ಬೀದಿಗೆ ಇಳಿದಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…