BREAKING NEWS

ಕೇರಳ: ಚಿಕಿತ್ಸೆ ನೀಡುವ ವೇಳೆ ವೈದ್ಯೆ ಮೇಲೆ ಕತ್ತರಿಯಿಂದ ಇರಿದು, ಹತ್ಯೆಗೈದ ವ್ಯಕ್ತಿ

ಕೊಚ್ಚಿ: ಚಿಕಿತ್ಸೆ ನೀಡುವ ವೇಳೆ ವೈದ್ಯೆಯನ್ನೇ ವ್ಯಕ್ತಿಯೊಬ್ಬ ಚುಚ್ಚಿ ಕೊಲೆಗೈದಿರುವ ಘಟನ ಕೇರಳದ ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಯಲ್ಲಿ ಬುಧವಾರ ( ಮೇ 10 ರಂದು) ನಡೆದಿರುವುದು ವರದಿಯಾಗಿದೆ.

ಘಟನೆ ಹಿನ್ನೆಲೆ:  ಪುಯಪಲ್ಲಿ ಚೆರುಕರಕೋಣಂ ನಿವಾಸಿ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಸಂದೀಪ್ (42) ಎಂಬ ವ್ಯಕ್ತಿ ಪೊಲೀಸರ ತುರ್ತು ಸಂಖ್ಯೆಗೆ ʼನನ್ನನ್ನು ನನ್ನ ಕುಟುಂಬದಿಂದ ರಕ್ಷಿಸಿʼ ಎಂದು ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದ ವೇಳೆ ಕರೆ ಮಾಡಿದ್ದ ಸಂದೀಪ್‌ ಕಾಲಿಗೆ ಗಾಯ ಮಾಡಿಕೊಂಡಿರುವುದು ಗೊತ್ತಾಗಿದೆ. ಕೂಡಲೇ ಅವರನ್ನು ಪೊಲೀಸರು ಕೊಟ್ಟಾರಕ್ಕರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ವೇಳೆ 22 ವರ್ಷದ ವಂದನಾ ದಾಸ್‌ ಎಂಬ ವೈದ್ಯೆಯೊಬ್ಬರು ಸಂದೀಪ್‌ ಅವರ ಗಾಯಗೊಂಡ ಕಾಲಿಗೆ ಬ್ಯಾಂಡೇಜ್‌ ಮಾಡಲು ಹೋಗಿದ್ದಾರೆ. ಬ್ಯಾಂಡೇಜ್‌ ಮಾಡುವಾಗ ಸಂದೀಪ್‌ ಇದ್ದಕ್ಕಿದ್ದಂತೆ ಅಲ್ಲೇ ಇದ್ದ ಕತ್ತರಿ ಮತ್ತು ಒಂದು ಚಿಕ್ಕಚಾಕುವಿನಿಂದ ವೈದ್ಯೆ ಮೇಲೆ ಹಲ್ಲೆ ಮಾಡಿದ್ದಾನೆ. ಜೀವ ಭಯದಿಂದ ಗಾಯಗೊಂಡು ಹೊರಬಂದ ವೈದ್ಯೆ ಕಾಪಾಡಿ ಎಂದಿದ್ದಾರೆ. ಸಿಟ್ಟಿನಲ್ಲಿದ್ದ ಸಂದೀಪ್‌ ನಿನ್ನನ್ನು ಕೊಲೆ ಮಾಡುತ್ತೇನೆ ಎಂದು ಮತ್ತೆ ಹಲ್ಲೆಗೈದಿದ್ದಾನೆ.

ಆಸ್ಪತ್ರೆ ಕೋಣೆ ಹೊರಗಿದ್ದ ಪೊಲೀಸರು ಆತನನ್ನು ತಡೆಯಲು ಯತ್ನಿಸಿದ್ದಾಗ ಪೊಲೀಸರ ಮೇಲೂ ಹಲ್ಲೆಗೈದು, ಆಸ್ಪತ್ರೆಯ ಕೆಲ ಸಾಮಾಗ್ರಿಗಳನ್ನು ಪುಡಿಗೈದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ವೈದ್ಯೆಯನ್ನು ಹೆಚ್ಚಿನ ಚಿಕಿತ್ಸೆಗೆ ತಿರುವನಂತಪುರಂ ಆಸ್ಪತ್ರೆಗೆ ದಾಖಲು ಮಾಡಿದರೂ ಆಕೆ ಮೃತಪಟ್ಟಿದ್ದಾರೆ.

ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವೈದ್ಯೆಗೆ ಹಲ್ಲೆಗೈದು ಹತ್ಯೆ ಮಾಡಲು ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಖಂಡಿಸಿ ಕೇರಳದಲ್ಲಿ ವೈದ್ಯರು ಪ್ರತಿಭಟನೆ ನಡೆಸಿ ಬೀದಿಗೆ ಇಳಿದಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

8 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

8 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

8 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

11 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

11 hours ago