BREAKING NEWS

ಕೇರಳ| ಶಿಕ್ಷಕನ ಕೈ ಕತ್ತರಿಸಿದ ಪ್ರಕರಣ: ಪಿಎಫ್‌ಐನ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಚ್ಚಿ (ಕೇರಳ):  2010ರ ಜುಲೈ 4ರಂದು ದೇಶಾದ್ಯಂತ ಸುದ್ದಿಯಾಗಿದ್ದ ತೊಡುಪುಯ ನ್ಯೂಮಾನ್‌ ಕಾಲೇಜಿನ ಮಲೆಯಾಳಂ ಶಿಕ್ಷಕ ಪ್ರೊ. ಟಿ.ಜೆ.ಜೋಸೆಫ್‌ ಅವರ ಕೈ ಕತ್ತರಿಸಿದ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಗೆ ಸೇರಿದ ಮೂವರು ಅಪರಾಧಿಗಳಿಗೆ ಕೊಚ್ಚಿಯ ಎನ್‌ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಎರಡನೆ ಆರೋಪಿ ಮೂವಾಟ್ಟುಪುಯ ನಿವಾಸಿ ಸಜಿಲ್‌ (36), ಮೂರನೇ ಆರೋಪಿ ಅಲುವಾ ನಿವಾಸಿ ಎಂ.ಕೆ.ನಾಸರ್‌ (48) ಮತ್ತು ಐದನೇ ಆರೋಪಿ ಕಡುಂಗಲ್ಲೂರು ನಿವಾಸಿ ನಜೀಬ್‌ (42) ಎಂಬವರು ಶಿಕ್ಷೆಗೊಳಗಾದ ಅಪರಾಧಿಗಳು. ಈ ಮೂವರಿಗೂ ತಲಾ 50 ಸಾವಿರ ರೂ. ದಂಡ ವಿಧಿಸಲಾಗಿದೆ.

ಮೂವರಿಗೆ ಜಾಮೀನು: ತಪ್ಪಿತಸ್ಥರೆಂದು ಸಾಬೀತಾದ ಉಳಿದ ಮೂವರು ಅಪರಾಧಿಗಳಿಗೂ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 9ನೇ ಆರೋಪಿ ಆಲುವಾ ನಿವಾಸಿ ಎಂ.ಕೆ.ನೌಶಾದ್‌ (48), 11ನೇ ಆರೋಪಿ ಅಲುವಾ ನಿವಾಸಿ ಪಿ.ಪಿ.ಮೊಯ್ದೀನ್‌ಕುಂಞಿ (60) ಮತ್ತು 12ನೇ ಆರೋಪಿ ಅಲುವಾ ನಿವಾಸಿ ಪಿ.ಎಂ.ಅಯೂಬ್‌ (48) ಎಂಬವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯ ಇವರಿಗೆ ಜಾಮೀನು ಮಂಜೂರು ಮಾಡಿದೆ. ಆರೋಪಿಗಳು ಪ್ರೊ.ಟಿ.ಜೆ.ಜೋಸೆಫ್‌ ಅವರಿಗೆ 4 ಲಕ್ಷ ರೂ. ಪರಿಹಾರ ನೀಡುವಂತೆಯೂ ಕೋರ್ಟ್‌ ಸೂಚಿಸಿದೆ.

ಮೂರು ವರ್ಷ ಅಥವಾ ಅದಕ್ಕಿಂತ ಕಡಿಮೆ ಶಿಕ್ಷೆಗೆ ಒಳಗಾದವರು ಜಾಮೀನು ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲು ನಿಯಮವು ಅವಕಾಶ ನೀಡುತ್ತದೆ. ಇದರ ಪ್ರಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಒಂದು ತಿಂಗಳ ಕಾಲಾವಕಾಶ ನೀಡಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣದ ಎರಡನೇ ಹಂತದ ವಿಚಾರಣೆಯನ್ನು ಪೂರ್ಣಗೊಳಿಸಿದ ಬಳಿಕ, ಕೊಚ್ಚಿಯ ಎನ್‌ಐಎ ವಿಶೇಷ ನ್ಯಾಯಾಲಯ ಇನ್ನೂ ಆರು ಆರೋಪಿಗಳನ್ನು ತಪ್ಪಿತಸ್ಥರೆಂದು ಘೋಷಿಸಿದೆ. ಈ ಪ್ರಕರಣದಲ್ಲಿ ಭಯೋತ್ಪಾದಕ ಚಟುವಟಿಕೆ ಸಾಬೀತಾಗಿದೆ ಎಂದೂ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣ: ಪ್ರಶ್ನೆ ಪತ್ರಿಕೆ ತಯಾರಿಕೆಯಲ್ಲಿ ಧರ್ಮನಿಂದನೆ ಮಾಡಲಾಗಿದೆ ಎಂದು ಆರೋಪಿಸಿ 2010ರ ಜುಲೈ 4ರಂದು ಪಿಎಫ್‌ಐ ಸಂಘಟನೆಯ ಕಾರ್ಯಕರ್ತರು ತರಗತಿಯಲ್ಲಿ ಪಾಠ ಮಾಡುತ್ತಿದ್ದ ಪ್ರೊ.ಟಿ.ಜೆ.ಜೋಸೆಫ್‌ ಅವರಿಗೆ ಹಲ್ಲೆ ನಡೆಸಿ ವಿದ್ಯಾರ್ಥಿಗಳ ಮುಂದೆಯೆ ಕೈ ಕತ್ತರಿಸಿದ್ದಾರೆ. ಮೊದಲ ಹಂತದಲ್ಲಿ ವಿಚಾರಣೆ ಎದುರಿಸಿದ 13 ಮಂದಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ 18 ಮಂದಿಯ ಮೇಲಿನ ಆರೋಪವನ್ನು ಕೈ ಬಿಡಲಾಗಿದೆ.

2015ರ ಬಳಿಕ ಬಂಧಿತರಾದ 11 ಆರೋಪಿಗಳ ವಿಚಾರಣೆಯನ್ನು ಎರಡನೇ ಹಂತದಲ್ಲಿ ನಡೆಸಲಾಗಿದೆ. ದಾಳಿಯ ಬಳಿಕ ತಲೆಮರೆಸಿಕೊಂಡ ಆರೋಪಿಗಳು ಇವರಲ್ಲಿ ಒಳಗೊಂಡಿದ್ದಾರೆ. ಮತ್ತು ಆರಂಭಿಕ ವಿಚಾರಣೆ ಬಳಿಕ ಇವರನ್ನು ಬಂಧಿಸಲಾಗಿದೆ.

ಎನ್‌ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿಲ್‌ ಕೆ.ಭಾಸ್ಕರ್‌ ವಿಚಾರಣೆ ಪೂರ್ಣಗೊಳಿಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ್ದಾರೆ. ಮೊದಲ ಹಂತದ ವಿಚಾರಣೆಯಲ್ಲಿ ಪ್ರಾಸಿಕ್ಯೂಷನ್‌ಗೆ ಪಿ.ಜಿ.ಮನು ಮತ್ತು ಬಳಿಕ ಸಿಂಧು ರವಿಶಂಕರ್‌ ವಕಾಲತ್ತು ನಡೆಸಿದ್ದಾರೆ.

ಬುಧವಾರ ನಡೆದ ಎರಡನೇ ಹಂತದ ವಿಚಾರಣೆಯಲ್ಲಿನ್ಯಾಯಾಲಯ ಐವರು ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಶಫೀಕ್‌ (31), ಅಜೀಜ್‌ ಓಡಕ್ಕಾಲಿ (36), ಮೊಹಮ್ಮದ್‌ ರಾಫಿ (40), ಟಿ.ಪಿ.ಜುಬೇರ್‌ (40) ಮತ್ತು ಮನ್ಸೂರ್‌ (52) ಎಂಬವರನ್ನು ಖುಲಾಸೆಗೊಳಿಸಲಾಗಿದೆ. ಪ್ರಕರಣದ ಮೊದಲ ಆರೋಪಿ ಸವಾದ್‌ (33) ಎಂಬಾತ ಇನ್ನೂ ತಲೆಮರೆಸಿಕೊಂಡಿದ್ದಾನೆ. ಸವಾದ್‌ ವಿದೇಶದಲ್ಲಿದ್ದಾನೆ ಎಂದು ಹೇಳಲಾಗುತ್ತಿದೆ.

andolanait

Recent Posts

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

1 hour ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

2 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

2 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

3 hours ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

3 hours ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

3 hours ago