BREAKING NEWS

ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ : ಜತೆಗಾತಿಯೂ ಆತ್ಮಹತ್ಯೆಗೆ ಯತ್ನ

ತಿರುವನಂತಪುರಂ : ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್‌ ಪ್ರವೀಣ್‌ ನಾಥ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಡೆದು ಕೆಲವೇ ಗಂಟೆಗಳ ಬಳಿಕ ಅವರ ಜತೆಗಾತಿ ಕೂಡಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪ್ರವೀಣ್ ನಾಥ್ ಅವರ ಪಾರ್ಟ್ನರ್‌ ರಿಶಾನಾ ಆಯೆಶಾ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಸ್ಥಿತಿ ಗಂಭೀರವಾಗಿದೆ.

ಟ್ರಾನ್ಸ್‌ಜೆಂಡರ್ ಬಾಡಿಬಿಲ್ಡರ್‌ ಅವರ ಜತೆಗಾತಿ ರಿಶಾನಾ ಆಯೆಶ್‌ ಓರ್ವ ಮಾಡೆಲ್ ಆಗಿ ಗುರುತಿಸಿಕೊಂಡಿದ್ದು, ಅವರು ಕೂಡಾ ಆತ್ಮಹತ್ಯಗೆ ಯತ್ನಿಸಿದ್ದಾರೆ. ಇದೀಗ ರಿಶಾನಾ ಅವರನ್ನು ತ್ರಿಶೂರ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಪರಿಸ್ಥಿತಿ ಕೂಡಾ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಪ್ರವೀಣ್ ನಾಥ್ ಅವರು ಗುರುವಾರವಷ್ಟೇ ತಮ್ಮ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಇಬ್ಬರ ಮೇಲೆ ಇತ್ತೀಚೆಗಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸೈಬರ್‌ದಾಳಿಯಿಂದಾಗಿ ನಿರಾಸೆ ಹಾಗೂ ಅವಮಾನಕ್ಕೊಳಗಾಗಿದ್ದರು. ಈ ಕಾರಣಕ್ಕಾಗಿಯೇ ಈ ಘಟನೆ ಸಂಭವಿಸಿದೆ ಎಂದು ತೃತೀಯಲಿಂಗಿ ಸಮುದಾಯದವರು ಆರೋಪಿಸಿದ್ದಾರೆ. ಪ್ರವೀಣ್ ನಾಥ್ ಅವರು ರಿಶಾನ್‌ ಅವರನ್ನು ಫೆಬ್ರವರಿ 14ರ ಪ್ರೇಮಿಗಳ ದಿನದಂದೇ ವಿವಾಹವಾಗಿದ್ದರು. ಇದರ ಬೆನ್ನಲ್ಲೇ ಹಲವಾರು ಮಂದಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸೈಬರ್‌ಅಟ್ಯಾಕ್‌ ಮಾಡಿದ್ದರು. ಇದರಿಂದ ಬೇಸತ್ತು ಈ ಜೋಡಿ ಸೋಷಿಯಲ್ ಮೀಡಿಯಾದಿಂದ ಹೊರಬಂದಿದ್ದರು.

ಈ ದಂಪತಿಗಳು ಬೇರೆ-ಬೇರೆಯಾಗುತ್ತಿದ್ದಾರೆ ಎಂದು ಪೋಸ್ಟರ್‌ ಒಂದು ಹರಿದಾಡುತ್ತಿತ್ತು. ಈ ಪೋಸ್ಟ್ ನೋಡಿದ ಬಳಿಕ ನಾನಂತೂ ಭಾವನಾತ್ಮಕವಾಗಿ ಕುಸಿದು ಹೋಗಿದ್ದೇನೆ. ನಾನು ಆ ಪೋಸ್ಟ್ ಡಿಲೀಟ್ ಮಾಡಿದ್ದರೂ ಸಹಾ, ಅದರ ಸ್ಕ್ರೀನ್‌ಶಾಟ್‌ ಬೇರೆ ಬೇರೆ ಕಡೆ ಹರಿದಾಡುತ್ತಿದೆ ಎಂದು ಪ್ರವೀಣ್‌ ನಾಥ್ ತಾವು ಆತ್ಮಹತ್ಯೆ ಮಾಡಿಕೊಳ್ಳುವ ಎರಡು ದಿನ ಮುಂಚೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಜೋಡಿಯು 2020ರಲ್ಲಿ ತ್ರಿಶೂರ್‌ನಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಕ್ಕಾಗಿ ನಡೆದ ಸಮಾವೇಶದಲ್ಲಿ ಈ ಜೋಡಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಇದಾದ ಬಳಿಕ ಈ ಇಬ್ಬರ ನಡುವೆ ಪ್ರೇಮಾಂಕುರ ಬೆಳೆದು ವ್ಯಾಲೆಂಟೈನ್ ಡೇ ದಿನದಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.

lokesh

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

4 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

5 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

5 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

6 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

6 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

6 hours ago