BREAKING NEWS

ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ನಿಧನ

ಮುಂಬೈ : ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ತಮ್ಮ 99ನೇ ವಯಸ್ಸಿನಲ್ಲಿ ನಿಧರಾಗಿದ್ದಾರೆ. $1.2 ಬಿಲಿಯನ್ (₹98,518,203,600) ಆಸ್ತಿಯನ್ನು ಹೊಂದಿರುವ ಇವರು ಭಾರತದ ಅತ್ಯಂತ ಹಿರಿಯ ಬಿಲಿಯನೇರ್ ಎಂದು ಖ್ಯಾತಿ ಪಡೆದಿದ್ದರು.

1923ರ ಅಕ್ಟೋಬರ್ 9ರಂದು ಶಿಮ್ಲಾದಲ್ಲಿ ಜನಿಸಿದ್ದ ಕೇಶುಬ್‌ ಅಮೆರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದರು. 1947ರಲ್ಲಿ ಮಹೀಂದ್ರಾ ಆಂಡ್‌ ಮಹೀಂದ್ರಾ ಗ್ರೂಪ್‌ನಲ್ಲಿ ಕೆಲಸ ಆರಂಭಿಸಿದ ಇವರು 1963ರಲ್ಲಿ ಕಂಪೆನಿಯ ಅಧ್ಯಕ್ಷರಾಗಿ ಆಯ್ಕೆಯಾದರು.

ಸುಮಾರು 48 ಮಹೀಂದ್ರಾ ಗ್ರೂಪ್‌ ಕಂಪೆನಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕೇಶುಬ್‌ ಅವರು ಕಂಪೆನಿಯನ್ನು ಆಟೋಮೊಬೈಲ್ ಕ್ಷೇತ್ರದಿಂದ ಐಟಿ, ರಿಯಲ್ ಎಸ್ಟೇಟ್, ಹಣಕಾಸು ಸೇವೆಗಳು ಹೀಗೆ ಇತರ ಕ್ಷೇತ್ರಗಳಿಗೂ ವಿಸ್ತರಿಸಿದ್ದರು.ಅಲ್ಲದೇ ವಿಲ್ಲಿಸ್ ಕಾರ್ಪೊರೇಷನ್, ಮಿತ್ಸುಬಿಷಿ, ಇಂಟರ್ನ್ಯಾಷನಲ್ ಹಾರ್ವೆಸ್ಟರ್, ಯುನೈಟೆಡ್ ಟೆಕ್ನಾಲಜೀಸ್, ಬ್ರಿಟಿಷ್ ಟೆಲಿಕಾಂ ಅಂತಹ ಜಾಗತಿಕ ಕಂಪೆನಿಗಳ ಮೈತ್ರಿ ಮಾಡಿಕೊಂಡು ವ್ಯಾಪಾರ ವಿಸ್ತರಿಸಿದ್ದರು.ಜೆಆರ್‌ಡಿ ಟಾಟಾ ಅವರ ಅಭಿಮಾನಿಯಾದ ಇವರು ತನ್ನ ಸಾಧನೆಗೆ ಅವರೇ ಸ್ಪೂರ್ತಿ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

2021ರಲ್ಲಿ ಕಂಪೆನಿಯ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದರು. ತದನಂತರ ಕಂಪೆನಿಯ ರೂವಾರಿಯನ್ನು ಕೇಶುಬ್‌ ಮಹೀಂದ್ರಾ ಅವರ ಸೋದರಳಿಯ ಆನಂದ್‌ ಮಹೀಂದ್ರಾ ವಹಿಸಿಕೊಂಡಿದ್ದರು.

andolanait

Recent Posts

ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭೇಟಿ

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…

8 mins ago

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…

27 mins ago

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…

1 hour ago

ಹೊಸ ವರ್ಷದ ಸಂಭ್ರಮ: ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಣೆ

ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…

2 hours ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

2 hours ago

ಹೊಸ ವರ್ಷದ ಸಂಭ್ರಮ: ದೇಗುಲಗಳತ್ತ ಭಕ್ತರ ದಂಡು

ಮೈಸೂರು: ಇಂದು ಹೊಸ ವರ್ಷದ ಸಂಭ್ರಮ ಮನೆ ಮಾಡಿರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ದೇವಾಲಯಗಳು ಭಕ್ತರಿಂದ ತುಂಬಿ ತುಳುಕುತ್ತಿವೆ.…

2 hours ago