BREAKING NEWS

ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ನಿಧನ

ಮುಂಬೈ : ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ತಮ್ಮ 99ನೇ ವಯಸ್ಸಿನಲ್ಲಿ ನಿಧರಾಗಿದ್ದಾರೆ. $1.2 ಬಿಲಿಯನ್ (₹98,518,203,600) ಆಸ್ತಿಯನ್ನು ಹೊಂದಿರುವ ಇವರು ಭಾರತದ ಅತ್ಯಂತ ಹಿರಿಯ ಬಿಲಿಯನೇರ್ ಎಂದು ಖ್ಯಾತಿ ಪಡೆದಿದ್ದರು.

1923ರ ಅಕ್ಟೋಬರ್ 9ರಂದು ಶಿಮ್ಲಾದಲ್ಲಿ ಜನಿಸಿದ್ದ ಕೇಶುಬ್‌ ಅಮೆರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದರು. 1947ರಲ್ಲಿ ಮಹೀಂದ್ರಾ ಆಂಡ್‌ ಮಹೀಂದ್ರಾ ಗ್ರೂಪ್‌ನಲ್ಲಿ ಕೆಲಸ ಆರಂಭಿಸಿದ ಇವರು 1963ರಲ್ಲಿ ಕಂಪೆನಿಯ ಅಧ್ಯಕ್ಷರಾಗಿ ಆಯ್ಕೆಯಾದರು.

ಸುಮಾರು 48 ಮಹೀಂದ್ರಾ ಗ್ರೂಪ್‌ ಕಂಪೆನಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕೇಶುಬ್‌ ಅವರು ಕಂಪೆನಿಯನ್ನು ಆಟೋಮೊಬೈಲ್ ಕ್ಷೇತ್ರದಿಂದ ಐಟಿ, ರಿಯಲ್ ಎಸ್ಟೇಟ್, ಹಣಕಾಸು ಸೇವೆಗಳು ಹೀಗೆ ಇತರ ಕ್ಷೇತ್ರಗಳಿಗೂ ವಿಸ್ತರಿಸಿದ್ದರು.ಅಲ್ಲದೇ ವಿಲ್ಲಿಸ್ ಕಾರ್ಪೊರೇಷನ್, ಮಿತ್ಸುಬಿಷಿ, ಇಂಟರ್ನ್ಯಾಷನಲ್ ಹಾರ್ವೆಸ್ಟರ್, ಯುನೈಟೆಡ್ ಟೆಕ್ನಾಲಜೀಸ್, ಬ್ರಿಟಿಷ್ ಟೆಲಿಕಾಂ ಅಂತಹ ಜಾಗತಿಕ ಕಂಪೆನಿಗಳ ಮೈತ್ರಿ ಮಾಡಿಕೊಂಡು ವ್ಯಾಪಾರ ವಿಸ್ತರಿಸಿದ್ದರು.ಜೆಆರ್‌ಡಿ ಟಾಟಾ ಅವರ ಅಭಿಮಾನಿಯಾದ ಇವರು ತನ್ನ ಸಾಧನೆಗೆ ಅವರೇ ಸ್ಪೂರ್ತಿ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

2021ರಲ್ಲಿ ಕಂಪೆನಿಯ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದರು. ತದನಂತರ ಕಂಪೆನಿಯ ರೂವಾರಿಯನ್ನು ಕೇಶುಬ್‌ ಮಹೀಂದ್ರಾ ಅವರ ಸೋದರಳಿಯ ಆನಂದ್‌ ಮಹೀಂದ್ರಾ ವಹಿಸಿಕೊಂಡಿದ್ದರು.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

5 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

6 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

7 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

13 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

20 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

20 hours ago