BREAKING NEWS

ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ನಿಧನ

ಮುಂಬೈ : ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ತಮ್ಮ 99ನೇ ವಯಸ್ಸಿನಲ್ಲಿ ನಿಧರಾಗಿದ್ದಾರೆ. $1.2 ಬಿಲಿಯನ್ (₹98,518,203,600) ಆಸ್ತಿಯನ್ನು ಹೊಂದಿರುವ ಇವರು ಭಾರತದ ಅತ್ಯಂತ ಹಿರಿಯ ಬಿಲಿಯನೇರ್ ಎಂದು ಖ್ಯಾತಿ ಪಡೆದಿದ್ದರು.

1923ರ ಅಕ್ಟೋಬರ್ 9ರಂದು ಶಿಮ್ಲಾದಲ್ಲಿ ಜನಿಸಿದ್ದ ಕೇಶುಬ್‌ ಅಮೆರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದರು. 1947ರಲ್ಲಿ ಮಹೀಂದ್ರಾ ಆಂಡ್‌ ಮಹೀಂದ್ರಾ ಗ್ರೂಪ್‌ನಲ್ಲಿ ಕೆಲಸ ಆರಂಭಿಸಿದ ಇವರು 1963ರಲ್ಲಿ ಕಂಪೆನಿಯ ಅಧ್ಯಕ್ಷರಾಗಿ ಆಯ್ಕೆಯಾದರು.

ಸುಮಾರು 48 ಮಹೀಂದ್ರಾ ಗ್ರೂಪ್‌ ಕಂಪೆನಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕೇಶುಬ್‌ ಅವರು ಕಂಪೆನಿಯನ್ನು ಆಟೋಮೊಬೈಲ್ ಕ್ಷೇತ್ರದಿಂದ ಐಟಿ, ರಿಯಲ್ ಎಸ್ಟೇಟ್, ಹಣಕಾಸು ಸೇವೆಗಳು ಹೀಗೆ ಇತರ ಕ್ಷೇತ್ರಗಳಿಗೂ ವಿಸ್ತರಿಸಿದ್ದರು.ಅಲ್ಲದೇ ವಿಲ್ಲಿಸ್ ಕಾರ್ಪೊರೇಷನ್, ಮಿತ್ಸುಬಿಷಿ, ಇಂಟರ್ನ್ಯಾಷನಲ್ ಹಾರ್ವೆಸ್ಟರ್, ಯುನೈಟೆಡ್ ಟೆಕ್ನಾಲಜೀಸ್, ಬ್ರಿಟಿಷ್ ಟೆಲಿಕಾಂ ಅಂತಹ ಜಾಗತಿಕ ಕಂಪೆನಿಗಳ ಮೈತ್ರಿ ಮಾಡಿಕೊಂಡು ವ್ಯಾಪಾರ ವಿಸ್ತರಿಸಿದ್ದರು.ಜೆಆರ್‌ಡಿ ಟಾಟಾ ಅವರ ಅಭಿಮಾನಿಯಾದ ಇವರು ತನ್ನ ಸಾಧನೆಗೆ ಅವರೇ ಸ್ಪೂರ್ತಿ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

2021ರಲ್ಲಿ ಕಂಪೆನಿಯ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದರು. ತದನಂತರ ಕಂಪೆನಿಯ ರೂವಾರಿಯನ್ನು ಕೇಶುಬ್‌ ಮಹೀಂದ್ರಾ ಅವರ ಸೋದರಳಿಯ ಆನಂದ್‌ ಮಹೀಂದ್ರಾ ವಹಿಸಿಕೊಂಡಿದ್ದರು.

andolanait

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

1 hour ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

1 hour ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

1 hour ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

3 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

4 hours ago