BREAKING NEWS

ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ನಿಧನ

ಮುಂಬೈ : ಮಹೀಂದ್ರಾ & ಮಹೀಂದ್ರಾ ಕಂ‍ಪೆನಿಯ ಮಾಜಿ ಅಧ್ಯಕ್ಷ ಕೇಶುಬ್‌ ಮಹೀಂದ್ರಾ ತಮ್ಮ 99ನೇ ವಯಸ್ಸಿನಲ್ಲಿ ನಿಧರಾಗಿದ್ದಾರೆ. $1.2 ಬಿಲಿಯನ್ (₹98,518,203,600) ಆಸ್ತಿಯನ್ನು ಹೊಂದಿರುವ ಇವರು ಭಾರತದ ಅತ್ಯಂತ ಹಿರಿಯ ಬಿಲಿಯನೇರ್ ಎಂದು ಖ್ಯಾತಿ ಪಡೆದಿದ್ದರು.

1923ರ ಅಕ್ಟೋಬರ್ 9ರಂದು ಶಿಮ್ಲಾದಲ್ಲಿ ಜನಿಸಿದ್ದ ಕೇಶುಬ್‌ ಅಮೆರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದರು. 1947ರಲ್ಲಿ ಮಹೀಂದ್ರಾ ಆಂಡ್‌ ಮಹೀಂದ್ರಾ ಗ್ರೂಪ್‌ನಲ್ಲಿ ಕೆಲಸ ಆರಂಭಿಸಿದ ಇವರು 1963ರಲ್ಲಿ ಕಂಪೆನಿಯ ಅಧ್ಯಕ್ಷರಾಗಿ ಆಯ್ಕೆಯಾದರು.

ಸುಮಾರು 48 ಮಹೀಂದ್ರಾ ಗ್ರೂಪ್‌ ಕಂಪೆನಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕೇಶುಬ್‌ ಅವರು ಕಂಪೆನಿಯನ್ನು ಆಟೋಮೊಬೈಲ್ ಕ್ಷೇತ್ರದಿಂದ ಐಟಿ, ರಿಯಲ್ ಎಸ್ಟೇಟ್, ಹಣಕಾಸು ಸೇವೆಗಳು ಹೀಗೆ ಇತರ ಕ್ಷೇತ್ರಗಳಿಗೂ ವಿಸ್ತರಿಸಿದ್ದರು.ಅಲ್ಲದೇ ವಿಲ್ಲಿಸ್ ಕಾರ್ಪೊರೇಷನ್, ಮಿತ್ಸುಬಿಷಿ, ಇಂಟರ್ನ್ಯಾಷನಲ್ ಹಾರ್ವೆಸ್ಟರ್, ಯುನೈಟೆಡ್ ಟೆಕ್ನಾಲಜೀಸ್, ಬ್ರಿಟಿಷ್ ಟೆಲಿಕಾಂ ಅಂತಹ ಜಾಗತಿಕ ಕಂಪೆನಿಗಳ ಮೈತ್ರಿ ಮಾಡಿಕೊಂಡು ವ್ಯಾಪಾರ ವಿಸ್ತರಿಸಿದ್ದರು.ಜೆಆರ್‌ಡಿ ಟಾಟಾ ಅವರ ಅಭಿಮಾನಿಯಾದ ಇವರು ತನ್ನ ಸಾಧನೆಗೆ ಅವರೇ ಸ್ಪೂರ್ತಿ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

2021ರಲ್ಲಿ ಕಂಪೆನಿಯ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದರು. ತದನಂತರ ಕಂಪೆನಿಯ ರೂವಾರಿಯನ್ನು ಕೇಶುಬ್‌ ಮಹೀಂದ್ರಾ ಅವರ ಸೋದರಳಿಯ ಆನಂದ್‌ ಮಹೀಂದ್ರಾ ವಹಿಸಿಕೊಂಡಿದ್ದರು.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

6 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

19 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

19 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

19 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

19 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

19 hours ago