ಚಂಡೀಗಢ : ಪ್ರತ್ಯೇಕ ಖಾಲಿಸ್ತಾನ ಪ್ರತಿಪಾದಕ, ಸಿಖ್ ಧರ್ಮ ಪ್ರಚಾರಕ ಅಮೃತ್ಪಾಲ್ ಸಿಂಗ್ನ ಸಹಚರ ಪಪಲ್ಪ್ರೀತ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ನ ಹೋಶಿಯಾರ್ಪುರದಲ್ಲಿನ ಡೇರಾದಲ್ಲಿ ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಇದೇ ಡೇರಾದಲ್ಲಿ ಪಪಲ್ಪ್ರೀತ್ ಸಿಂಗ್ ಇರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿದ್ದವು.
ಪಪಲ್ಪ್ರೀತ್ ಸಿಂಗ್ನ ಬಂಧನವಾಗಿದ್ದು ಕೆಲ ದಿನಗಳಲ್ಲಿ ಅಮೃತ್ಪಾಲ್ ಸಿಂಗ್ ಬಂಧನವಾಗಬಹುದು ಎಂದು ಪಂಜಾಬ್ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಪರಾರಿಯಾದ ಅಮೃತಪಾಲ್ ಸಿಂಗ್ ಮತ್ತು ಆತನ ಸಹಾಯಕರು ಜಲಂಧರ್, ಹೋಶಿಯಾರ್ಪುರ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದ ಡೇರಾಗಳಲ್ಲಿ ಆಶ್ರಯ ಪಡೆದಿದ್ದರು. ಅಮೃತಪಾಲ್ ಮತ್ತು ಪಪಲ್ಪ್ರೀತ್ ಸಿಂಗ್ ಫಗ್ವಾರಾ ಪಟ್ಟಣ, ನಾದ್ಲೋನ್ ಮತ್ತು ಬೀಬಿ ಗ್ರಾಮದ ಮೂರು ವಿಭಿನ್ನ ಡೇರಾಗಳಲ್ಲಿ ತಂಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಮೃತಪಾಲ್ ಸಿಂಗ್ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…