BREAKING NEWS

ಖಾಲಿಸ್ತಾನ ಪ್ರತಿಪಾದಕ : ಅಮೃತ್‌ಪಾಲ್‌ ಸಿಂಗ್‌ ಸಹಚರನ ಬಂಧನ

ಚಂಡೀಗಢ : ಪ್ರತ್ಯೇಕ ಖಾಲಿಸ್ತಾನ ಪ್ರತಿಪಾದಕ, ಸಿಖ್‌ ಧರ್ಮ ಪ್ರಚಾರಕ ಅಮೃತ್‌ಪಾಲ್‌ ಸಿಂಗ್‌ನ ಸಹಚರ ಪಪಲ್​ಪ್ರೀತ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್‌ನ ಹೋಶಿಯಾರ್‌ಪುರದಲ್ಲಿನ ಡೇರಾದಲ್ಲಿ ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಇದೇ ಡೇರಾದಲ್ಲಿ ಪಪಲ್​ಪ್ರೀತ್ ಸಿಂಗ್‌ ಇರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿದ್ದವು.

ಪಪಲ್​ಪ್ರೀತ್​ ಸಿಂಗ್​ನ ಬಂಧನವಾಗಿದ್ದು ಕೆಲ ದಿನಗಳಲ್ಲಿ ಅಮೃತ್​ಪಾಲ್​ ಸಿಂಗ್ ಬಂಧನವಾಗಬಹುದು ಎಂದು ಪಂಜಾಬ್‌ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಪರಾರಿಯಾದ ಅಮೃತಪಾಲ್ ಸಿಂಗ್ ಮತ್ತು ಆತನ ಸಹಾಯಕರು ಜಲಂಧರ್, ಹೋಶಿಯಾರ್‌ಪುರ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದ ಡೇರಾಗಳಲ್ಲಿ ಆಶ್ರಯ ಪಡೆದಿದ್ದರು. ಅಮೃತಪಾಲ್ ಮತ್ತು ಪಪಲ್​ಪ್ರೀತ್ ಸಿಂಗ್‌ ಫಗ್ವಾರಾ ಪಟ್ಟಣ, ನಾದ್ಲೋನ್ ಮತ್ತು ಬೀಬಿ ಗ್ರಾಮದ ಮೂರು ವಿಭಿನ್ನ ಡೇರಾಗಳಲ್ಲಿ ತಂಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಮೃತಪಾಲ್ ಸಿಂಗ್‌ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.

lokesh

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

4 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

4 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

8 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

10 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

11 hours ago