ಚಂಡೀಗಢ : ಪ್ರತ್ಯೇಕ ಖಾಲಿಸ್ತಾನ ಪ್ರತಿಪಾದಕ, ಸಿಖ್ ಧರ್ಮ ಪ್ರಚಾರಕ ಅಮೃತ್ಪಾಲ್ ಸಿಂಗ್ನ ಸಹಚರ ಪಪಲ್ಪ್ರೀತ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ನ ಹೋಶಿಯಾರ್ಪುರದಲ್ಲಿನ ಡೇರಾದಲ್ಲಿ ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಇದೇ ಡೇರಾದಲ್ಲಿ ಪಪಲ್ಪ್ರೀತ್ ಸಿಂಗ್ ಇರುವ ಸಿಸಿಟಿವಿ ದೃಶ್ಯಗಳು ಪೊಲೀಸರಿಗೆ ಲಭಿಸಿದ್ದವು.
ಪಪಲ್ಪ್ರೀತ್ ಸಿಂಗ್ನ ಬಂಧನವಾಗಿದ್ದು ಕೆಲ ದಿನಗಳಲ್ಲಿ ಅಮೃತ್ಪಾಲ್ ಸಿಂಗ್ ಬಂಧನವಾಗಬಹುದು ಎಂದು ಪಂಜಾಬ್ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ಪರಾರಿಯಾದ ಅಮೃತಪಾಲ್ ಸಿಂಗ್ ಮತ್ತು ಆತನ ಸಹಾಯಕರು ಜಲಂಧರ್, ಹೋಶಿಯಾರ್ಪುರ ಮತ್ತು ಅಮೃತಸರ ಜಿಲ್ಲೆಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದ ಡೇರಾಗಳಲ್ಲಿ ಆಶ್ರಯ ಪಡೆದಿದ್ದರು. ಅಮೃತಪಾಲ್ ಮತ್ತು ಪಪಲ್ಪ್ರೀತ್ ಸಿಂಗ್ ಫಗ್ವಾರಾ ಪಟ್ಟಣ, ನಾದ್ಲೋನ್ ಮತ್ತು ಬೀಬಿ ಗ್ರಾಮದ ಮೂರು ವಿಭಿನ್ನ ಡೇರಾಗಳಲ್ಲಿ ತಂಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾರ್ಚ್ 18ರಿಂದ ಅಮೃತಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಮೃತಪಾಲ್ ಸಿಂಗ್ನ ನೂರಾರು ಬೆಂಬಲಿಗರನ್ನು ಬಂಧಿಸಲಾಗಿದೆ. ಕೆಲವರನ್ನು ವಶಕ್ಕೆ ಪಡೆಯಲಾಗಿದೆ. ರೈಫಲ್, ರಿವಾಲ್ವರ್, ಸಜೀವ ಗುಂಡುಗಳನ್ನು ಜಪ್ತಿ ಮಾಡಲಾಗಿದೆ.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…