BREAKING NEWS

ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ‘ಖಾಲಿಸ್ತಾನ್‌ ಜಿಂದಾಬಾದ್’ ಬರಹ: ಪೊಲೀಸರಿಂದ ತನಿಖೆ

ನವದೆಹಲಿ: ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ಖಲಿಸ್ತಾನ ಪರ ಗೋಡೆ ಬರಹಗಳು ಕಾಣಿಸಿಕೊಂಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ದೆಹಲಿಯ 5ಕ್ಕೂ ಹೆಚ್ಚು ಮೆಟ್ರೊ ನಿಲ್ದಾಣಗಳ ಗೋಡೆಗಳ ಮೇಲೆ ಕಿಡಿಗೇಡಿಗಳು ‘ದೆಹಲಿ ಬನೇಗಾ ಖಾಲಿಸ್ತಾನ್ ಮತ್ತು ಖಾಲಿಸ್ತಾನ್ ಜಿಂದಾಬಾದ್’ ಎಂಬ ಬರಹಗಳನ್ನು ಬರೆದಿದ್ದಾರೆ. ಈ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಜಿ20 ಮೇಲೆ ಕರಿನೆರಳು
ಮುಂದಿನ ತಿಂಗಳು ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯಲಿದ್ದು, ಇದರ ಬೆನ್ನಲ್ಲೇ ಕಿಡಿಗೇಡಿಗಳ ಈ ಕೃತ್ಯ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಡೀ ದೇಶವೇ ಜಿ20 ಶೃಂಗಸಭೆಗೆ ಅತಿಥ್ಯ ವಹಿಸುತ್ತಿದೆ. ಆದರೆ ಅತಿಥಿಗಳು ದೆಹಲಿಗೆ ಆಗಮಿಸುತ್ತಾರೆ. ಜಿ20 ಶೃಂಗಸಭೆ ಯಶಸ್ವಿಗೊಳಿಸಲು ದೆಹಲಿ ನಿವಾಸಿಗಳ ಮೇಲೆ ವಿಶೇಷ ಜವಾಬ್ದಾರಿ ಇದೆ. ರಾಷ್ಟ್ರದ ಘನತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಜಿ-20 ಶೃಂಗಸಭೆ ಸೆ. 9 ಹಾಗೂ 10ರಂದು ನಡೆಯಲಿದೆ. 40ಕ್ಕೂ ಹೆಚ್ಚು ದೇಶಗಳ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಯ್ದ ದೇಶಗಳ ಅತಿಥಿಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

andolanait

Recent Posts

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

3 mins ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

60 mins ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

2 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

2 hours ago

ಭೀಕರ ಸರಣಿ ಅಪಘಾತ : ಬೆಂಗಳೂರಿನ 6 ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು…

3 hours ago

ಓದುಗರ ಪತ್ರ | ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ, ರಾಮಕೃಷ್ಣ ವೃತ್ತದಿಂದ (ಆಂದೋಲನ ಸರ್ಕಲ್), ಕುವೆಂಪು ನಗರದ ಕಾಂಪ್ಲೆಕ್ ತನಕದ ಸುಮಾರು ಒಂದು ಕಿ.ಮೀ. ದೂರದ…

3 hours ago