ನವದೆಹಲಿ: ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ಖಲಿಸ್ತಾನ ಪರ ಗೋಡೆ ಬರಹಗಳು ಕಾಣಿಸಿಕೊಂಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ದೆಹಲಿಯ 5ಕ್ಕೂ ಹೆಚ್ಚು ಮೆಟ್ರೊ ನಿಲ್ದಾಣಗಳ ಗೋಡೆಗಳ ಮೇಲೆ ಕಿಡಿಗೇಡಿಗಳು ‘ದೆಹಲಿ ಬನೇಗಾ ಖಾಲಿಸ್ತಾನ್ ಮತ್ತು ಖಾಲಿಸ್ತಾನ್ ಜಿಂದಾಬಾದ್’ ಎಂಬ ಬರಹಗಳನ್ನು ಬರೆದಿದ್ದಾರೆ. ಈ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜಿ20 ಮೇಲೆ ಕರಿನೆರಳು
ಮುಂದಿನ ತಿಂಗಳು ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯಲಿದ್ದು, ಇದರ ಬೆನ್ನಲ್ಲೇ ಕಿಡಿಗೇಡಿಗಳ ಈ ಕೃತ್ಯ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಡೀ ದೇಶವೇ ಜಿ20 ಶೃಂಗಸಭೆಗೆ ಅತಿಥ್ಯ ವಹಿಸುತ್ತಿದೆ. ಆದರೆ ಅತಿಥಿಗಳು ದೆಹಲಿಗೆ ಆಗಮಿಸುತ್ತಾರೆ. ಜಿ20 ಶೃಂಗಸಭೆ ಯಶಸ್ವಿಗೊಳಿಸಲು ದೆಹಲಿ ನಿವಾಸಿಗಳ ಮೇಲೆ ವಿಶೇಷ ಜವಾಬ್ದಾರಿ ಇದೆ. ರಾಷ್ಟ್ರದ ಘನತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಜಿ-20 ಶೃಂಗಸಭೆ ಸೆ. 9 ಹಾಗೂ 10ರಂದು ನಡೆಯಲಿದೆ. 40ಕ್ಕೂ ಹೆಚ್ಚು ದೇಶಗಳ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಯ್ದ ದೇಶಗಳ ಅತಿಥಿಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…
ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…