ನವದೆಹಲಿ: ದೆಹಲಿ ಮೆಟ್ರೊ ನಿಲ್ದಾಣಗಳ ಗೋಡೆ ಮೇಲೆ ಖಲಿಸ್ತಾನ ಪರ ಗೋಡೆ ಬರಹಗಳು ಕಾಣಿಸಿಕೊಂಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ ದೆಹಲಿಯ 5ಕ್ಕೂ ಹೆಚ್ಚು ಮೆಟ್ರೊ ನಿಲ್ದಾಣಗಳ ಗೋಡೆಗಳ ಮೇಲೆ ಕಿಡಿಗೇಡಿಗಳು ‘ದೆಹಲಿ ಬನೇಗಾ ಖಾಲಿಸ್ತಾನ್ ಮತ್ತು ಖಾಲಿಸ್ತಾನ್ ಜಿಂದಾಬಾದ್’ ಎಂಬ ಬರಹಗಳನ್ನು ಬರೆದಿದ್ದಾರೆ. ಈ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜಿ20 ಮೇಲೆ ಕರಿನೆರಳು
ಮುಂದಿನ ತಿಂಗಳು ದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯಲಿದ್ದು, ಇದರ ಬೆನ್ನಲ್ಲೇ ಕಿಡಿಗೇಡಿಗಳ ಈ ಕೃತ್ಯ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಇಡೀ ದೇಶವೇ ಜಿ20 ಶೃಂಗಸಭೆಗೆ ಅತಿಥ್ಯ ವಹಿಸುತ್ತಿದೆ. ಆದರೆ ಅತಿಥಿಗಳು ದೆಹಲಿಗೆ ಆಗಮಿಸುತ್ತಾರೆ. ಜಿ20 ಶೃಂಗಸಭೆ ಯಶಸ್ವಿಗೊಳಿಸಲು ದೆಹಲಿ ನಿವಾಸಿಗಳ ಮೇಲೆ ವಿಶೇಷ ಜವಾಬ್ದಾರಿ ಇದೆ. ರಾಷ್ಟ್ರದ ಘನತೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಜಿ-20 ಶೃಂಗಸಭೆ ಸೆ. 9 ಹಾಗೂ 10ರಂದು ನಡೆಯಲಿದೆ. 40ಕ್ಕೂ ಹೆಚ್ಚು ದೇಶಗಳ ನಾಯಕರು, ಯುರೋಪಿಯನ್ ಒಕ್ಕೂಟದ ಉನ್ನತ ಅಧಿಕಾರಿಗಳು, ಆಯ್ದ ದೇಶಗಳ ಅತಿಥಿಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…