BREAKING NEWS

ರೋಬೋಟಿಕ್ ಬಳಸಿ ಕಿಡ್ನಿ ಕಸಿ: ಚಂಡೀಗಢದ ಪಿಜಿಐನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ

ಚಂಡೀಗಢ: ಇಲ್ಲಿನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ಮೂತ್ರಶಾಸ್ತ್ರ ವಿಭಾಗವು ಮೊದಲ ಬಾರಿಗೆ ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡಿದೆ.

ಮೂತ್ರಪಿಂಡ ಕಸಿಯಲ್ಲಿ ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ತೊಂದರೆಗಳ ಸಾಧ್ಯತೆ ಕಡಿಮೆಯಾಗಲಿದೆ. ಸ್ಥೂಲಕಾಯದ ರೋಗಿಗಳಿಗೆ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂತ್ರಶಾಸ್ತ್ರ ವಿಭಾಗವು 2015ರಿಂದ ರೋಬೋಟಿಕ್ ಶಸ್ತ್ರಚಿಕಿತ್ಸೆ ಅಧ್ಯಯನ ನಡೆಸುತ್ತಿದೆ.

ರೋಬೋಟಿಕ್‌ ಶಸ್ತ್ರಚಿಕಿತ್ಸೆಯಲ್ಲಿನ ಅನುಭವವು ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡುವ ವಿಧಾನವನನ್ನು ಅನುಸರಿಸುವಂತೆ ಪ್ರೇರೇಪಿಸಿತು ಎಂದು ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಉತ್ತಮ್ ಮೆಟೆ ತಿಳಿಸಿದ್ದಾರೆ.

ಸಾಮಾನ್ಯವಾಗಿ, ಮೂತ್ರಪಿಂಡ ಕಸಿಯನ್ನು ತೆರೆದ ಶಸ್ತ್ರಚಿಕಿತ್ಸೆ ಮೂಲಕ ನಡೆಸಲಾಗುತ್ತದೆ. ಉದರದ ಛೇದನದ ಶಸ್ತ್ರಚಿಕಿತ್ಸೆ ರೋಗಿಯಿಂದ ರೋಗಿಗೆ, ಆಸ್ಪತ್ರೆಯಿಂದ ಆಸ್ಪತ್ರೆಗೆ, ವೈದ್ಯರಿಂದ ವೈದ್ಯರಿಗೆ ವಿಭಿನ್ನವಾಗಿರುತ್ತದೆ. ಶಸ್ತ್ರ ಚಿಕಿತ್ಸೆ ನಡೆಸುವ ವೇಳೆ ಸೋಂಕು ಹರಡದಂತೆ ತಡೆಯಲು ರೋಬೋಟ್ ವಿಧಾನ ಸಹಾಕಾರಿಯಾಗಿದೆ ಎಂದು ಮೆಟೆ ಹೇಳಿದ್ದಾರೆ.

ಗಾಯದ ಸೋಂಕು ತಡೆಗಟ್ಟಲು ಲ್ಯಾಪರೊಸ್ಕೋಪಿಕ್ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು ಸಹಾಯಕ.

ರೋಬೋಟ್ ಕಸಿ ಮಾಡಿಸಿಕೊಂಡ ಇಬ್ಬರೂ ರೋಗಿಗಳು ಉತ್ತಮವಾಗಿ ಇದ್ದಾರೆ ಎಂದು ಮೂತ್ರಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಾಂಕಿ ಸಿಂಗ್ ತಿಳಿಸಿದ್ದಾರೆ.

ರೋಬೋಟ್ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೇಶ್ ಅಹ್ಲಾವತ್ ಮತ್ತು ಮೇದಾಂತ ಹಾಗೂ ಡಾ ಸುದೀಪ್ ಬೊದ್ದುಲೂರಿ ಅವರು ರೋಬೋಟಿಕ್ ಕಸಿ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago