BREAKING NEWS

ರೋಬೋಟಿಕ್ ಬಳಸಿ ಕಿಡ್ನಿ ಕಸಿ: ಚಂಡೀಗಢದ ಪಿಜಿಐನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ

ಚಂಡೀಗಢ: ಇಲ್ಲಿನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ಮೂತ್ರಶಾಸ್ತ್ರ ವಿಭಾಗವು ಮೊದಲ ಬಾರಿಗೆ ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡಿದೆ.

ಮೂತ್ರಪಿಂಡ ಕಸಿಯಲ್ಲಿ ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ತೊಂದರೆಗಳ ಸಾಧ್ಯತೆ ಕಡಿಮೆಯಾಗಲಿದೆ. ಸ್ಥೂಲಕಾಯದ ರೋಗಿಗಳಿಗೆ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂತ್ರಶಾಸ್ತ್ರ ವಿಭಾಗವು 2015ರಿಂದ ರೋಬೋಟಿಕ್ ಶಸ್ತ್ರಚಿಕಿತ್ಸೆ ಅಧ್ಯಯನ ನಡೆಸುತ್ತಿದೆ.

ರೋಬೋಟಿಕ್‌ ಶಸ್ತ್ರಚಿಕಿತ್ಸೆಯಲ್ಲಿನ ಅನುಭವವು ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡುವ ವಿಧಾನವನನ್ನು ಅನುಸರಿಸುವಂತೆ ಪ್ರೇರೇಪಿಸಿತು ಎಂದು ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಉತ್ತಮ್ ಮೆಟೆ ತಿಳಿಸಿದ್ದಾರೆ.

ಸಾಮಾನ್ಯವಾಗಿ, ಮೂತ್ರಪಿಂಡ ಕಸಿಯನ್ನು ತೆರೆದ ಶಸ್ತ್ರಚಿಕಿತ್ಸೆ ಮೂಲಕ ನಡೆಸಲಾಗುತ್ತದೆ. ಉದರದ ಛೇದನದ ಶಸ್ತ್ರಚಿಕಿತ್ಸೆ ರೋಗಿಯಿಂದ ರೋಗಿಗೆ, ಆಸ್ಪತ್ರೆಯಿಂದ ಆಸ್ಪತ್ರೆಗೆ, ವೈದ್ಯರಿಂದ ವೈದ್ಯರಿಗೆ ವಿಭಿನ್ನವಾಗಿರುತ್ತದೆ. ಶಸ್ತ್ರ ಚಿಕಿತ್ಸೆ ನಡೆಸುವ ವೇಳೆ ಸೋಂಕು ಹರಡದಂತೆ ತಡೆಯಲು ರೋಬೋಟ್ ವಿಧಾನ ಸಹಾಕಾರಿಯಾಗಿದೆ ಎಂದು ಮೆಟೆ ಹೇಳಿದ್ದಾರೆ.

ಗಾಯದ ಸೋಂಕು ತಡೆಗಟ್ಟಲು ಲ್ಯಾಪರೊಸ್ಕೋಪಿಕ್ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು ಸಹಾಯಕ.

ರೋಬೋಟ್ ಕಸಿ ಮಾಡಿಸಿಕೊಂಡ ಇಬ್ಬರೂ ರೋಗಿಗಳು ಉತ್ತಮವಾಗಿ ಇದ್ದಾರೆ ಎಂದು ಮೂತ್ರಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಾಂಕಿ ಸಿಂಗ್ ತಿಳಿಸಿದ್ದಾರೆ.

ರೋಬೋಟ್ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೇಶ್ ಅಹ್ಲಾವತ್ ಮತ್ತು ಮೇದಾಂತ ಹಾಗೂ ಡಾ ಸುದೀಪ್ ಬೊದ್ದುಲೂರಿ ಅವರು ರೋಬೋಟಿಕ್ ಕಸಿ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ್ದಾರೆ.

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

5 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

10 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

10 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

11 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

11 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

12 hours ago