BREAKING NEWS

ರೋಬೋಟಿಕ್ ಬಳಸಿ ಕಿಡ್ನಿ ಕಸಿ: ಚಂಡೀಗಢದ ಪಿಜಿಐನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ

ಚಂಡೀಗಢ: ಇಲ್ಲಿನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ಮೂತ್ರಶಾಸ್ತ್ರ ವಿಭಾಗವು ಮೊದಲ ಬಾರಿಗೆ ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡಿದೆ.

ಮೂತ್ರಪಿಂಡ ಕಸಿಯಲ್ಲಿ ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ತೊಂದರೆಗಳ ಸಾಧ್ಯತೆ ಕಡಿಮೆಯಾಗಲಿದೆ. ಸ್ಥೂಲಕಾಯದ ರೋಗಿಗಳಿಗೆ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂತ್ರಶಾಸ್ತ್ರ ವಿಭಾಗವು 2015ರಿಂದ ರೋಬೋಟಿಕ್ ಶಸ್ತ್ರಚಿಕಿತ್ಸೆ ಅಧ್ಯಯನ ನಡೆಸುತ್ತಿದೆ.

ರೋಬೋಟಿಕ್‌ ಶಸ್ತ್ರಚಿಕಿತ್ಸೆಯಲ್ಲಿನ ಅನುಭವವು ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡುವ ವಿಧಾನವನನ್ನು ಅನುಸರಿಸುವಂತೆ ಪ್ರೇರೇಪಿಸಿತು ಎಂದು ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಉತ್ತಮ್ ಮೆಟೆ ತಿಳಿಸಿದ್ದಾರೆ.

ಸಾಮಾನ್ಯವಾಗಿ, ಮೂತ್ರಪಿಂಡ ಕಸಿಯನ್ನು ತೆರೆದ ಶಸ್ತ್ರಚಿಕಿತ್ಸೆ ಮೂಲಕ ನಡೆಸಲಾಗುತ್ತದೆ. ಉದರದ ಛೇದನದ ಶಸ್ತ್ರಚಿಕಿತ್ಸೆ ರೋಗಿಯಿಂದ ರೋಗಿಗೆ, ಆಸ್ಪತ್ರೆಯಿಂದ ಆಸ್ಪತ್ರೆಗೆ, ವೈದ್ಯರಿಂದ ವೈದ್ಯರಿಗೆ ವಿಭಿನ್ನವಾಗಿರುತ್ತದೆ. ಶಸ್ತ್ರ ಚಿಕಿತ್ಸೆ ನಡೆಸುವ ವೇಳೆ ಸೋಂಕು ಹರಡದಂತೆ ತಡೆಯಲು ರೋಬೋಟ್ ವಿಧಾನ ಸಹಾಕಾರಿಯಾಗಿದೆ ಎಂದು ಮೆಟೆ ಹೇಳಿದ್ದಾರೆ.

ಗಾಯದ ಸೋಂಕು ತಡೆಗಟ್ಟಲು ಲ್ಯಾಪರೊಸ್ಕೋಪಿಕ್ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು ಸಹಾಯಕ.

ರೋಬೋಟ್ ಕಸಿ ಮಾಡಿಸಿಕೊಂಡ ಇಬ್ಬರೂ ರೋಗಿಗಳು ಉತ್ತಮವಾಗಿ ಇದ್ದಾರೆ ಎಂದು ಮೂತ್ರಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಾಂಕಿ ಸಿಂಗ್ ತಿಳಿಸಿದ್ದಾರೆ.

ರೋಬೋಟ್ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೇಶ್ ಅಹ್ಲಾವತ್ ಮತ್ತು ಮೇದಾಂತ ಹಾಗೂ ಡಾ ಸುದೀಪ್ ಬೊದ್ದುಲೂರಿ ಅವರು ರೋಬೋಟಿಕ್ ಕಸಿ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ್ದಾರೆ.

andolanait

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

1 hour ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

1 hour ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

1 hour ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

2 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

3 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

4 hours ago