BREAKING NEWS

ರೋಬೋಟಿಕ್ ಬಳಸಿ ಕಿಡ್ನಿ ಕಸಿ: ಚಂಡೀಗಢದ ಪಿಜಿಐನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ

ಚಂಡೀಗಢ: ಇಲ್ಲಿನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ಮೂತ್ರಶಾಸ್ತ್ರ ವಿಭಾಗವು ಮೊದಲ ಬಾರಿಗೆ ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡಿದೆ.

ಮೂತ್ರಪಿಂಡ ಕಸಿಯಲ್ಲಿ ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ತೊಂದರೆಗಳ ಸಾಧ್ಯತೆ ಕಡಿಮೆಯಾಗಲಿದೆ. ಸ್ಥೂಲಕಾಯದ ರೋಗಿಗಳಿಗೆ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂತ್ರಶಾಸ್ತ್ರ ವಿಭಾಗವು 2015ರಿಂದ ರೋಬೋಟಿಕ್ ಶಸ್ತ್ರಚಿಕಿತ್ಸೆ ಅಧ್ಯಯನ ನಡೆಸುತ್ತಿದೆ.

ರೋಬೋಟಿಕ್‌ ಶಸ್ತ್ರಚಿಕಿತ್ಸೆಯಲ್ಲಿನ ಅನುಭವವು ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡುವ ವಿಧಾನವನನ್ನು ಅನುಸರಿಸುವಂತೆ ಪ್ರೇರೇಪಿಸಿತು ಎಂದು ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಉತ್ತಮ್ ಮೆಟೆ ತಿಳಿಸಿದ್ದಾರೆ.

ಸಾಮಾನ್ಯವಾಗಿ, ಮೂತ್ರಪಿಂಡ ಕಸಿಯನ್ನು ತೆರೆದ ಶಸ್ತ್ರಚಿಕಿತ್ಸೆ ಮೂಲಕ ನಡೆಸಲಾಗುತ್ತದೆ. ಉದರದ ಛೇದನದ ಶಸ್ತ್ರಚಿಕಿತ್ಸೆ ರೋಗಿಯಿಂದ ರೋಗಿಗೆ, ಆಸ್ಪತ್ರೆಯಿಂದ ಆಸ್ಪತ್ರೆಗೆ, ವೈದ್ಯರಿಂದ ವೈದ್ಯರಿಗೆ ವಿಭಿನ್ನವಾಗಿರುತ್ತದೆ. ಶಸ್ತ್ರ ಚಿಕಿತ್ಸೆ ನಡೆಸುವ ವೇಳೆ ಸೋಂಕು ಹರಡದಂತೆ ತಡೆಯಲು ರೋಬೋಟ್ ವಿಧಾನ ಸಹಾಕಾರಿಯಾಗಿದೆ ಎಂದು ಮೆಟೆ ಹೇಳಿದ್ದಾರೆ.

ಗಾಯದ ಸೋಂಕು ತಡೆಗಟ್ಟಲು ಲ್ಯಾಪರೊಸ್ಕೋಪಿಕ್ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು ಸಹಾಯಕ.

ರೋಬೋಟ್ ಕಸಿ ಮಾಡಿಸಿಕೊಂಡ ಇಬ್ಬರೂ ರೋಗಿಗಳು ಉತ್ತಮವಾಗಿ ಇದ್ದಾರೆ ಎಂದು ಮೂತ್ರಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಾಂಕಿ ಸಿಂಗ್ ತಿಳಿಸಿದ್ದಾರೆ.

ರೋಬೋಟ್ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೇಶ್ ಅಹ್ಲಾವತ್ ಮತ್ತು ಮೇದಾಂತ ಹಾಗೂ ಡಾ ಸುದೀಪ್ ಬೊದ್ದುಲೂರಿ ಅವರು ರೋಬೋಟಿಕ್ ಕಸಿ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

13 hours ago