ಚಂಡೀಗಢ: ಇಲ್ಲಿನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ಮೂತ್ರಶಾಸ್ತ್ರ ವಿಭಾಗವು ಮೊದಲ ಬಾರಿಗೆ ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡಿದೆ.
ಮೂತ್ರಪಿಂಡ ಕಸಿಯಲ್ಲಿ ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ತೊಂದರೆಗಳ ಸಾಧ್ಯತೆ ಕಡಿಮೆಯಾಗಲಿದೆ. ಸ್ಥೂಲಕಾಯದ ರೋಗಿಗಳಿಗೆ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಮೂತ್ರಶಾಸ್ತ್ರ ವಿಭಾಗವು 2015ರಿಂದ ರೋಬೋಟಿಕ್ ಶಸ್ತ್ರಚಿಕಿತ್ಸೆ ಅಧ್ಯಯನ ನಡೆಸುತ್ತಿದೆ.
ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿನ ಅನುಭವವು ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡುವ ವಿಧಾನವನನ್ನು ಅನುಸರಿಸುವಂತೆ ಪ್ರೇರೇಪಿಸಿತು ಎಂದು ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಉತ್ತಮ್ ಮೆಟೆ ತಿಳಿಸಿದ್ದಾರೆ.
ಸಾಮಾನ್ಯವಾಗಿ, ಮೂತ್ರಪಿಂಡ ಕಸಿಯನ್ನು ತೆರೆದ ಶಸ್ತ್ರಚಿಕಿತ್ಸೆ ಮೂಲಕ ನಡೆಸಲಾಗುತ್ತದೆ. ಉದರದ ಛೇದನದ ಶಸ್ತ್ರಚಿಕಿತ್ಸೆ ರೋಗಿಯಿಂದ ರೋಗಿಗೆ, ಆಸ್ಪತ್ರೆಯಿಂದ ಆಸ್ಪತ್ರೆಗೆ, ವೈದ್ಯರಿಂದ ವೈದ್ಯರಿಗೆ ವಿಭಿನ್ನವಾಗಿರುತ್ತದೆ. ಶಸ್ತ್ರ ಚಿಕಿತ್ಸೆ ನಡೆಸುವ ವೇಳೆ ಸೋಂಕು ಹರಡದಂತೆ ತಡೆಯಲು ರೋಬೋಟ್ ವಿಧಾನ ಸಹಾಕಾರಿಯಾಗಿದೆ ಎಂದು ಮೆಟೆ ಹೇಳಿದ್ದಾರೆ.
ಗಾಯದ ಸೋಂಕು ತಡೆಗಟ್ಟಲು ಲ್ಯಾಪರೊಸ್ಕೋಪಿಕ್ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು ಸಹಾಯಕ.
ರೋಬೋಟ್ ಕಸಿ ಮಾಡಿಸಿಕೊಂಡ ಇಬ್ಬರೂ ರೋಗಿಗಳು ಉತ್ತಮವಾಗಿ ಇದ್ದಾರೆ ಎಂದು ಮೂತ್ರಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಾಂಕಿ ಸಿಂಗ್ ತಿಳಿಸಿದ್ದಾರೆ.
ರೋಬೋಟ್ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೇಶ್ ಅಹ್ಲಾವತ್ ಮತ್ತು ಮೇದಾಂತ ಹಾಗೂ ಡಾ ಸುದೀಪ್ ಬೊದ್ದುಲೂರಿ ಅವರು ರೋಬೋಟಿಕ್ ಕಸಿ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…