BREAKING NEWS

ರೋಬೋಟಿಕ್ ಬಳಸಿ ಕಿಡ್ನಿ ಕಸಿ: ಚಂಡೀಗಢದ ಪಿಜಿಐನಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ

ಚಂಡೀಗಢ: ಇಲ್ಲಿನ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯ ಸ್ನಾತಕೋತ್ತರ ಸಂಸ್ಥೆಯ ಮೂತ್ರಶಾಸ್ತ್ರ ವಿಭಾಗವು ಮೊದಲ ಬಾರಿಗೆ ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡಿದೆ.

ಮೂತ್ರಪಿಂಡ ಕಸಿಯಲ್ಲಿ ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ತೊಂದರೆಗಳ ಸಾಧ್ಯತೆ ಕಡಿಮೆಯಾಗಲಿದೆ. ಸ್ಥೂಲಕಾಯದ ರೋಗಿಗಳಿಗೆ ಇದು ಹೆಚ್ಚು ಪರಿಣಾಮಕಾರಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮೂತ್ರಶಾಸ್ತ್ರ ವಿಭಾಗವು 2015ರಿಂದ ರೋಬೋಟಿಕ್ ಶಸ್ತ್ರಚಿಕಿತ್ಸೆ ಅಧ್ಯಯನ ನಡೆಸುತ್ತಿದೆ.

ರೋಬೋಟಿಕ್‌ ಶಸ್ತ್ರಚಿಕಿತ್ಸೆಯಲ್ಲಿನ ಅನುಭವವು ರೋಬೋಟ್ ಸಹಾಯದಿಂದ ಮೂತ್ರಪಿಂಡ ಕಸಿ ಮಾಡುವ ವಿಧಾನವನನ್ನು ಅನುಸರಿಸುವಂತೆ ಪ್ರೇರೇಪಿಸಿತು ಎಂದು ಮೂತ್ರಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಉತ್ತಮ್ ಮೆಟೆ ತಿಳಿಸಿದ್ದಾರೆ.

ಸಾಮಾನ್ಯವಾಗಿ, ಮೂತ್ರಪಿಂಡ ಕಸಿಯನ್ನು ತೆರೆದ ಶಸ್ತ್ರಚಿಕಿತ್ಸೆ ಮೂಲಕ ನಡೆಸಲಾಗುತ್ತದೆ. ಉದರದ ಛೇದನದ ಶಸ್ತ್ರಚಿಕಿತ್ಸೆ ರೋಗಿಯಿಂದ ರೋಗಿಗೆ, ಆಸ್ಪತ್ರೆಯಿಂದ ಆಸ್ಪತ್ರೆಗೆ, ವೈದ್ಯರಿಂದ ವೈದ್ಯರಿಗೆ ವಿಭಿನ್ನವಾಗಿರುತ್ತದೆ. ಶಸ್ತ್ರ ಚಿಕಿತ್ಸೆ ನಡೆಸುವ ವೇಳೆ ಸೋಂಕು ಹರಡದಂತೆ ತಡೆಯಲು ರೋಬೋಟ್ ವಿಧಾನ ಸಹಾಕಾರಿಯಾಗಿದೆ ಎಂದು ಮೆಟೆ ಹೇಳಿದ್ದಾರೆ.

ಗಾಯದ ಸೋಂಕು ತಡೆಗಟ್ಟಲು ಲ್ಯಾಪರೊಸ್ಕೋಪಿಕ್ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು ಸಹಾಯಕ.

ರೋಬೋಟ್ ಕಸಿ ಮಾಡಿಸಿಕೊಂಡ ಇಬ್ಬರೂ ರೋಗಿಗಳು ಉತ್ತಮವಾಗಿ ಇದ್ದಾರೆ ಎಂದು ಮೂತ್ರಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಾಂಕಿ ಸಿಂಗ್ ತಿಳಿಸಿದ್ದಾರೆ.

ರೋಬೋಟ್ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸಕ ಡಾ. ರಾಜೇಶ್ ಅಹ್ಲಾವತ್ ಮತ್ತು ಮೇದಾಂತ ಹಾಗೂ ಡಾ ಸುದೀಪ್ ಬೊದ್ದುಲೂರಿ ಅವರು ರೋಬೋಟಿಕ್ ಕಸಿ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago