BREAKING NEWS

ಕೇರಳ ತ್ರಿವಳಿ ಸ್ಫೋಟಕ್ಕೆ ಹೊಣೆ ಹೊತ್ತ ಕೊಚ್ಚಿ ನಿವಾಸಿ ಪೊಲೀಸರಿಗೆ ಶರಣು

ತಿರುವನಂತಪುರಂ : ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಕೇರಳದ ಕೊಚ್ಚಿಯ ಕಲಮಸ್ಸೇರಿ ಧಾರ್ಮಿಕ ಸಮಾವೇಶದ ಸಂದರ್ಭದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ತ್ರಿವಳಿ ಸ್ಫೋಟಕ್ಕೆ ಸಂಬಂಧಿಸಿದಂತೆ ತ್ರಿಶೂರ್ ಜಿಲ್ಲೆಯಲ್ಲಿ ಓರ್ವ ಶಂಕಿತ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಫೋಟಕ್ಕೆ ನಾನೇ ಕಾರಣ ಎಂದು ಹೇಳಿಕೊಂಡ ಆ ವ್ಯಕ್ತಿ ಕೊಡಕರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ.

ಶರಣಾದ ವ್ಯಕ್ತಿಯನ್ನು 44 ವರ್ಷದ ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾಗಿದ್ದು, ಈತ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಅನುಯಾಯಿ ಎಂದು ಹೇಳಿಕೊಂಡಿದ್ದಾನೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಎಂ ಆರ್ ಅಜಿತ್ ಕುಮಾರ್ ತಿಳಿಸಿದ್ದಾರೆ.

ಡೊಮಿನಿಕ್ ಮಾರ್ಟಿನ್ ಸ್ಫೋಟದ ಹೊಣೆ ಹೊತ್ತುಕೊಂಡಿದ್ದು, ಅವನು ತನ್ನ ವಾದವನ್ನು ಬೆಂಬಲಿಸುವ ಸಾಕ್ಷ್ಯವನ್ನು ಸಹ ನೀಡಿದ್ದಾನೆ. ಕೃತ್ಯಕ್ಕೆ ನೀಡಿದ ಕಾರಣ ಮತ್ತು ಸಾಕ್ಷ್ಯಗಳನ್ನು ಸಹ ಪರಿಶೀಲಿಸುತ್ತಿದ್ದೇವೆ. ಬೆಳಿಗ್ಗೆ ಸಂಭವಿಸಿದ್ದ ಸ್ಫೋಟದಲ್ಲಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದರು. 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರೆ, ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಡಿಜಿಪಿ ಸುದ್ದಿಗಾರರಿಗೆ ತಿಳಿಸಿದರು.

ಈ ಘಟನೆಯು ಪೊಲೀಸರ ಗುಪ್ತಚರ ವೈಫಲ್ಯದ ಪರಿಣಾಮವೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಎಡಿಜಿಪಿ, ಎಲ್ಲಾ ಪೊಲೀಸ್ ಇಲಾಖೆಯ ಶಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

andolanait

Recent Posts

ಮಳೆ ಕೊರತೆ ನಡುವೆಯೂ ತರಕಾರಿ ಅಗ್ಗ

ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…

2 mins ago

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

10 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

12 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

20 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

20 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

20 hours ago