ಬೆಂಗಳೂರು : ಪಠ್ಯ ಪುಸ್ತಕದಲ್ಲಿರುವ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಕೆಲ ಬದಲಾವಣೆ ಮಾಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರ ‘ನೀ ಬರೆದ ಪತ್ರ’, ಸಾವಿತ್ರಿ ಬಾಯಿ ಪುಲೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯವನ್ನು ಮರು ಸೇರ್ಪಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಚಕ್ರವರ್ತಿ ಸೂಲಿಬೆಲೆ ಅವರು ಬರೆದಿರುವ ರಾಜಗುರು, ಭಗತ್ ಸಿಂಗ್ ಮತ್ತು ಸುಖದೇವ್ ಅವರ ಕುರಿತಾಗಿರುವ ಪಠ್ಯವನ್ನು ಕೈಬಿಡಲು ತೀರ್ಮಾನಿಸಲಾಗಿದೆ.
8ನೇ ತರಗತಿ ಕನ್ನಡ ವಿಷಯದಲ್ಲಿ ಕೆ.ಟಿ.ಗಟ್ಟಿ ಅವರು ಬರೆದಿದ್ದ ಸಾವರ್ಕರ್ ಅವರನ್ನು ಬಂಧಿಸಿಟ್ಟಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಕುರಿತು ಬರೆದಿದ್ದ ಪ್ರವಾಸ ಕಥನ ಆಧಾರಿತ ‘ಕಾಲವನ್ನು ಗೆದ್ದವರು’ ಪಾಠವನ್ನು ಸೇರಿಸಲಾಗಿತ್ತು. ಈಗ ಕಾಂಗ್ರೆಸ್ ಸರಕಾರ ಆ ಪಠ್ಯವನ್ನು ಕೈಬಿಡಲು ತೀರ್ಮಾನಿಸಿದೆ.
10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಅವರ ಭಾಷಣದ ತುಣುಕನ್ನು ಒಂದು ಅಧ್ಯಾಯವಾಗಿ ಸೇರ್ಪಡೆ ಮಾಡಲಾಗಿತ್ತು, ಅದನ್ನೂ ಈಗ ಕೈ ಬಿಡಲಾಗುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…