BREAKING NEWS

ಹೆಡ್ಗೆವಾರ್,ಸಾವರ್ಕರ್ ಪಠ್ಯಕ್ಕೆ ಕೊಕ್: ನೆಹರು ವಿಚಾರ ಸೇರ್ಪಡೆ

ಬೆಂಗಳೂರು : ಪಠ್ಯ ಪುಸ್ತಕದಲ್ಲಿರುವ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಕೆಲ ಬದಲಾವಣೆ ಮಾಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರ ‘ನೀ ಬರೆದ ಪತ್ರ’, ಸಾವಿತ್ರಿ ಬಾಯಿ ಪುಲೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯವನ್ನು ಮರು ಸೇರ್ಪಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚಕ್ರವರ್ತಿ ಸೂಲಿಬೆಲೆ ಅವರು ಬರೆದಿರುವ ರಾಜಗುರು, ಭಗತ್ ಸಿಂಗ್ ಮತ್ತು ಸುಖದೇವ್ ಅವರ ಕುರಿತಾಗಿರುವ ಪಠ್ಯವನ್ನು ಕೈಬಿಡಲು ತೀರ್ಮಾನಿಸಲಾಗಿದೆ.

8ನೇ ತರಗತಿ ಕನ್ನಡ ವಿಷಯದಲ್ಲಿ ಕೆ.ಟಿ.ಗಟ್ಟಿ ಅವರು ಬರೆದಿದ್ದ ಸಾವರ್ಕರ್ ಅವರನ್ನು ಬಂಧಿಸಿಟ್ಟಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಕುರಿತು ಬರೆದಿದ್ದ ಪ್ರವಾಸ ಕಥನ ಆಧಾರಿತ ‘ಕಾಲವನ್ನು ಗೆದ್ದವರು’ ಪಾಠವನ್ನು ಸೇರಿಸಲಾಗಿತ್ತು. ಈಗ ಕಾಂಗ್ರೆಸ್ ಸರಕಾರ ಆ ಪಠ್ಯವನ್ನು ಕೈಬಿಡಲು ತೀರ್ಮಾನಿಸಿದೆ.

10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಅವರ ಭಾಷಣದ ತುಣುಕನ್ನು ಒಂದು ಅಧ್ಯಾಯವಾಗಿ ಸೇರ್ಪಡೆ ಮಾಡಲಾಗಿತ್ತು, ಅದನ್ನೂ ಈಗ ಕೈ ಬಿಡಲಾಗುತ್ತಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago