BREAKING NEWS

ಹೆಡ್ಗೆವಾರ್,ಸಾವರ್ಕರ್ ಪಠ್ಯಕ್ಕೆ ಕೊಕ್: ನೆಹರು ವಿಚಾರ ಸೇರ್ಪಡೆ

ಬೆಂಗಳೂರು : ಪಠ್ಯ ಪುಸ್ತಕದಲ್ಲಿರುವ ಆರ್ ಎಸ್ ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಡ್ಗೆವಾರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ವಿಷಯಗಳನ್ನು ಕೈಬಿಡಲು ರಾಜ್ಯ ಸರಕಾರ ತೀರ್ಮಾನ ಮಾಡಿದೆ.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

6 ರಿಂದ 10 ನೇ ತರಗತಿಯ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಕೆಲ ಬದಲಾವಣೆ ಮಾಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಇಂದಿರಾ ಗಾಂಧಿ ಅವರಿಗೆ ಬರೆದ ಪತ್ರ ‘ನೀ ಬರೆದ ಪತ್ರ’, ಸಾವಿತ್ರಿ ಬಾಯಿ ಪುಲೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಷಯವನ್ನು ಮರು ಸೇರ್ಪಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚಕ್ರವರ್ತಿ ಸೂಲಿಬೆಲೆ ಅವರು ಬರೆದಿರುವ ರಾಜಗುರು, ಭಗತ್ ಸಿಂಗ್ ಮತ್ತು ಸುಖದೇವ್ ಅವರ ಕುರಿತಾಗಿರುವ ಪಠ್ಯವನ್ನು ಕೈಬಿಡಲು ತೀರ್ಮಾನಿಸಲಾಗಿದೆ.

8ನೇ ತರಗತಿ ಕನ್ನಡ ವಿಷಯದಲ್ಲಿ ಕೆ.ಟಿ.ಗಟ್ಟಿ ಅವರು ಬರೆದಿದ್ದ ಸಾವರ್ಕರ್ ಅವರನ್ನು ಬಂಧಿಸಿಟ್ಟಿದ್ದ ಅಂಡಮಾನ್ ಜೈಲಿಗೆ ಭೇಟಿ ನೀಡಿದ ಕುರಿತು ಬರೆದಿದ್ದ ಪ್ರವಾಸ ಕಥನ ಆಧಾರಿತ ‘ಕಾಲವನ್ನು ಗೆದ್ದವರು’ ಪಾಠವನ್ನು ಸೇರಿಸಲಾಗಿತ್ತು. ಈಗ ಕಾಂಗ್ರೆಸ್ ಸರಕಾರ ಆ ಪಠ್ಯವನ್ನು ಕೈಬಿಡಲು ತೀರ್ಮಾನಿಸಿದೆ.

10ನೇ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಅವರ ಭಾಷಣದ ತುಣುಕನ್ನು ಒಂದು ಅಧ್ಯಾಯವಾಗಿ ಸೇರ್ಪಡೆ ಮಾಡಲಾಗಿತ್ತು, ಅದನ್ನೂ ಈಗ ಕೈ ಬಿಡಲಾಗುತ್ತಿದೆ.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

4 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

4 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

4 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

4 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

4 hours ago