BREAKING NEWS

ಕೋಲಾರ| ಮರ್ಯಾದಾ ಹತ್ಯೆ ಪ್ರಕರಣ: ಕರ್ತವ್ಯಲೋಪವೆಸಗಿದ ಪೋಲಿಸ್​ ಅಮಾನತು

ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಹಿನ್ನೆಲೆ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಪಿ.ಜೆ.ಮಧುಕರ್​​ನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಭಾನುವಾರ ಆದೇಶ ಹೊರಡಿಸಿದ್ದಾರೆ.

ಜೂನ್ 27ರಂದು ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿತ್ತು. ಮರ್ಯಾದಾ ಹತ್ಯೆ ಪ್ರಕರಣದ ತನಿಖೆಯಲ್ಲಿ ಸಿಪಿಐ ಲೋಪವೆಸಗಿದ್ದರು. ಕಾಮಸಮುದ್ರ ಸಿಪಿಐ ಮಧುಕರ್​​ ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಲಾಗಿದೆ.

ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕುತ್ತಿಗೆ ಹಿಸುಕಿ ಸಾಯಿಸಿದ್ದಾನೆ. ಇತ್ತ ತಾನು ಪ್ರೀಸಿದ ಹುಡುಗಿ ಮೃತಪಟ್ಟಿದ್ದಾಳೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಗಾಬರಿಗೊಂಡ ಯುವಕ ತಾನೂ ಕೂಡ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ.

ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೃಷ್ಣಮೂರ್ತಿ ಎಂಬುವರ ಮಗಳು ಕೀರ್ತಿ (20) ಕೆಜಿಎಫ್​ನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದಳು. ಅದೇ ಗ್ರಾಮದ ಪರಿಶಿಷ್ಟ ಜನಾಂಗಕ್ಕೆ ಸೇರಿದ ಗಂಗಾಧರ್​ ಎಂಬ ಯುವಕನನ್ನು ಇತ್ತೀಚೆಗೆ ಪ್ರೀತಿಸುತ್ತಿದ್ದಾಳೆ ಎನ್ನುವ ವಿಚಾರ ಗ್ರಾಮದಲ್ಲಿ ತಿಳಿದಿತ್ತು.

ಈ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಅಲ್ಲದೆ ಯುವತಿಗೆ ಬುದ್ದಿ ಹೇಳುವ ಕೆಲಸ ಕೂಡ ನಡೆದಿತ್ತಾದರೂ ಯವತಿ ತಂದೆ ತಾಯಿಯ ಮಾತನ್ನು ಧಿಕ್ಕರಿಸಿ ಆತನನ್ನೇ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಹಾಗಾಗಿ ಯುವತಿ ತಂದೆ ಕೃಷ್ಣಮೂರ್ತಿ ಮಗಳನ್ನು ಕುತ್ತಿಗೆ ಹಿಸುಕಿ ಸಾಯಿಸಿದ್ದರು.

ತಾನು ಪ್ರೀತಿಸುತ್ತಿದ್ದ ಹುಡುಗಿ ಮೃತಪಟ್ಟ ವಿಚಾರ ತಿಳಿದು ಗಾಬರಿಗೊಂಡ ಯುವಕ, ಓಡಿ ಹೋಗಿ ಕಾಮಸಮುದ್ರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ತಾನು ಆತ್ಮಹತ್ಯೆಗೆ ಶರಣಾಗಿದ್ದ. ವಿಷಯ ತಿಳಿದು ಗ್ರಾಮಕ್ಕೆ ಬೇಟಿ ನೀಡಿರುವ ಕಾಮಸಮುದ್ರ ಪೊಲೀಸರು ಆರೋಪಿ ಕೃಷ್ಣಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.

andolanait

Recent Posts

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

19 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

24 mins ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

38 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

1 hour ago

ಅಕ್ರಮ ಗಾಂಜಾ ಮಾರಾಟ: ಮಹಿಳೆ ಬಂಧನ

ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…

1 hour ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

2 hours ago