ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಹಿನ್ನೆಲೆ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಪಿ.ಜೆ.ಮಧುಕರ್ನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಭಾನುವಾರ ಆದೇಶ ಹೊರಡಿಸಿದ್ದಾರೆ.
ಜೂನ್ 27ರಂದು ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿತ್ತು. ಮರ್ಯಾದಾ ಹತ್ಯೆ ಪ್ರಕರಣದ ತನಿಖೆಯಲ್ಲಿ ಸಿಪಿಐ ಲೋಪವೆಸಗಿದ್ದರು. ಕಾಮಸಮುದ್ರ ಸಿಪಿಐ ಮಧುಕರ್ ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಲಾಗಿದೆ.
ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕುತ್ತಿಗೆ ಹಿಸುಕಿ ಸಾಯಿಸಿದ್ದಾನೆ. ಇತ್ತ ತಾನು ಪ್ರೀಸಿದ ಹುಡುಗಿ ಮೃತಪಟ್ಟಿದ್ದಾಳೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಗಾಬರಿಗೊಂಡ ಯುವಕ ತಾನೂ ಕೂಡ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ.
ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೃಷ್ಣಮೂರ್ತಿ ಎಂಬುವರ ಮಗಳು ಕೀರ್ತಿ (20) ಕೆಜಿಎಫ್ನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದಳು. ಅದೇ ಗ್ರಾಮದ ಪರಿಶಿಷ್ಟ ಜನಾಂಗಕ್ಕೆ ಸೇರಿದ ಗಂಗಾಧರ್ ಎಂಬ ಯುವಕನನ್ನು ಇತ್ತೀಚೆಗೆ ಪ್ರೀತಿಸುತ್ತಿದ್ದಾಳೆ ಎನ್ನುವ ವಿಚಾರ ಗ್ರಾಮದಲ್ಲಿ ತಿಳಿದಿತ್ತು.
ಈ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಅಲ್ಲದೆ ಯುವತಿಗೆ ಬುದ್ದಿ ಹೇಳುವ ಕೆಲಸ ಕೂಡ ನಡೆದಿತ್ತಾದರೂ ಯವತಿ ತಂದೆ ತಾಯಿಯ ಮಾತನ್ನು ಧಿಕ್ಕರಿಸಿ ಆತನನ್ನೇ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಹಾಗಾಗಿ ಯುವತಿ ತಂದೆ ಕೃಷ್ಣಮೂರ್ತಿ ಮಗಳನ್ನು ಕುತ್ತಿಗೆ ಹಿಸುಕಿ ಸಾಯಿಸಿದ್ದರು.
ತಾನು ಪ್ರೀತಿಸುತ್ತಿದ್ದ ಹುಡುಗಿ ಮೃತಪಟ್ಟ ವಿಚಾರ ತಿಳಿದು ಗಾಬರಿಗೊಂಡ ಯುವಕ, ಓಡಿ ಹೋಗಿ ಕಾಮಸಮುದ್ರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ತಾನು ಆತ್ಮಹತ್ಯೆಗೆ ಶರಣಾಗಿದ್ದ. ವಿಷಯ ತಿಳಿದು ಗ್ರಾಮಕ್ಕೆ ಬೇಟಿ ನೀಡಿರುವ ಕಾಮಸಮುದ್ರ ಪೊಲೀಸರು ಆರೋಪಿ ಕೃಷ್ಣಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…