ಕೋಲಾರ: ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪವೆಸಗಿದ ಹಿನ್ನೆಲೆ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಪಿ.ಜೆ.ಮಧುಕರ್ನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಭಾನುವಾರ ಆದೇಶ ಹೊರಡಿಸಿದ್ದಾರೆ.
ಜೂನ್ 27ರಂದು ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೋಡಗುರ್ಕಿ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆದಿತ್ತು. ಮರ್ಯಾದಾ ಹತ್ಯೆ ಪ್ರಕರಣದ ತನಿಖೆಯಲ್ಲಿ ಸಿಪಿಐ ಲೋಪವೆಸಗಿದ್ದರು. ಕಾಮಸಮುದ್ರ ಸಿಪಿಐ ಮಧುಕರ್ ಅಮಾನತುಗೊಳಿಸಿ ಐಜಿಪಿ ಆದೇಶ ಹೊರಡಿಸಲಾಗಿದೆ.
ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕುತ್ತಿಗೆ ಹಿಸುಕಿ ಸಾಯಿಸಿದ್ದಾನೆ. ಇತ್ತ ತಾನು ಪ್ರೀಸಿದ ಹುಡುಗಿ ಮೃತಪಟ್ಟಿದ್ದಾಳೆ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಗಾಬರಿಗೊಂಡ ಯುವಕ ತಾನೂ ಕೂಡ ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ.
ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೃಷ್ಣಮೂರ್ತಿ ಎಂಬುವರ ಮಗಳು ಕೀರ್ತಿ (20) ಕೆಜಿಎಫ್ನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದಳು. ಅದೇ ಗ್ರಾಮದ ಪರಿಶಿಷ್ಟ ಜನಾಂಗಕ್ಕೆ ಸೇರಿದ ಗಂಗಾಧರ್ ಎಂಬ ಯುವಕನನ್ನು ಇತ್ತೀಚೆಗೆ ಪ್ರೀತಿಸುತ್ತಿದ್ದಾಳೆ ಎನ್ನುವ ವಿಚಾರ ಗ್ರಾಮದಲ್ಲಿ ತಿಳಿದಿತ್ತು.
ಈ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾತುಕತೆ ನಡೆದಿದೆ ಅಲ್ಲದೆ ಯುವತಿಗೆ ಬುದ್ದಿ ಹೇಳುವ ಕೆಲಸ ಕೂಡ ನಡೆದಿತ್ತಾದರೂ ಯವತಿ ತಂದೆ ತಾಯಿಯ ಮಾತನ್ನು ಧಿಕ್ಕರಿಸಿ ಆತನನ್ನೇ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ. ಹಾಗಾಗಿ ಯುವತಿ ತಂದೆ ಕೃಷ್ಣಮೂರ್ತಿ ಮಗಳನ್ನು ಕುತ್ತಿಗೆ ಹಿಸುಕಿ ಸಾಯಿಸಿದ್ದರು.
ತಾನು ಪ್ರೀತಿಸುತ್ತಿದ್ದ ಹುಡುಗಿ ಮೃತಪಟ್ಟ ವಿಚಾರ ತಿಳಿದು ಗಾಬರಿಗೊಂಡ ಯುವಕ, ಓಡಿ ಹೋಗಿ ಕಾಮಸಮುದ್ರ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ತಾನು ಆತ್ಮಹತ್ಯೆಗೆ ಶರಣಾಗಿದ್ದ. ವಿಷಯ ತಿಳಿದು ಗ್ರಾಮಕ್ಕೆ ಬೇಟಿ ನೀಡಿರುವ ಕಾಮಸಮುದ್ರ ಪೊಲೀಸರು ಆರೋಪಿ ಕೃಷ್ಣಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…