BREAKING NEWS

ಕೋಲಾರ| ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ: ನೊಂದು ರೈಲಿಗೆ ತಲೆಕೊಟ್ಟು ಪ್ರಿಯತಮ ಆತ್ಮಹತ್ಯೆ

ಕೋಲಾರ: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.

ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್​(24) ಎಂದು ಗುರುತಿಸಲಾಗಿದೆ. ಕೀರ್ತಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಗಂಗಾಧರ್ ತಮಟೆ ಕಲಾವಿದನಾಗಿದ್ದು ಗಾರೆ ಕೆಲಸ ಮಾಡುತ್ತಿದ್ದ. ಕೀರ್ತಿ ತಂದೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ.

ಮೃತ ಗಂಗಾಧರ್​ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಸಂಬಂಧ ಗಂಗಾಧರ್​ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದಾನೆ. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದಾನೆ. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿದೆ. ಇಬ್ಬರ ಮದುವೆಗೆ ಕೀರ್ತಿಯ ತಂದೆ ಒಪ್ಪಿಗೆ ಸೂಚಿಸಿರಲಿಲ್ಲ ಎಂದು ತಿಳಿದುಬಂದಿದೆ.

ಗಂಗಾಧರ್​ನನ್ನು ಮರೆತುಬಿಡುವಂತೆ ಪೋಷಕರು ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಅನ್ನದೇ ಇಬ್ಬರೂ ಪ್ರೀತಿಸುತ್ತಿದ್ದರು. ಈ ಸಂಬಂಧ ಮಂಗಳವಾರ ಬೆಳಗ್ಗೆ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.

ಈ ಸುದ್ದಿ ಹತ್ತಿರದಲ್ಲೇ ಇದ್ದ ಗಂಗಾಧರ್ ಮತ್ತು ಅವರ ಕುಟುಂಬಕ್ಕೆ ತಲುಪಿತು. ಯಾವುದೇ ಸಮಸ್ಯೆಯಾಗದಂತೆ ಗಂಗಾಧರ್ ಅಣ್ಣ ಶ್ರೀನಿವಾಸ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ರೈಲ್ವೇ ಹಳಿ ಬಳಿ ಹೋಗುತ್ತಿದ್ದಾಗ ಗಂಗಾಧರ್ ನೀರು ಕುಡಿಯುತ್ತೇನೆ ಎಂದು ಹೇಳಿ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ.

ಗಾಡಿ ನಿಲ್ಲಿಸಿದ ಕೂಡಲೇ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ಬಾಲಕಿಯ ತಂದೆ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ ಧರಣಿ ದೇವಿ  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago