BREAKING NEWS

ಕೋಲಾರ| ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ: ನೊಂದು ರೈಲಿಗೆ ತಲೆಕೊಟ್ಟು ಪ್ರಿಯತಮ ಆತ್ಮಹತ್ಯೆ

ಕೋಲಾರ: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ.

ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್​(24) ಎಂದು ಗುರುತಿಸಲಾಗಿದೆ. ಕೀರ್ತಿ ಪದವಿ ವ್ಯಾಸಂಗ ಮಾಡುತ್ತಿದ್ದಳು ಗಂಗಾಧರ್ ತಮಟೆ ಕಲಾವಿದನಾಗಿದ್ದು ಗಾರೆ ಕೆಲಸ ಮಾಡುತ್ತಿದ್ದ. ಕೀರ್ತಿ ತಂದೆ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ.

ಮೃತ ಗಂಗಾಧರ್​ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಸಂಬಂಧ ಗಂಗಾಧರ್​ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದಾನೆ. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದಾನೆ. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿದೆ. ಇಬ್ಬರ ಮದುವೆಗೆ ಕೀರ್ತಿಯ ತಂದೆ ಒಪ್ಪಿಗೆ ಸೂಚಿಸಿರಲಿಲ್ಲ ಎಂದು ತಿಳಿದುಬಂದಿದೆ.

ಗಂಗಾಧರ್​ನನ್ನು ಮರೆತುಬಿಡುವಂತೆ ಪೋಷಕರು ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಅನ್ನದೇ ಇಬ್ಬರೂ ಪ್ರೀತಿಸುತ್ತಿದ್ದರು. ಈ ಸಂಬಂಧ ಮಂಗಳವಾರ ಬೆಳಗ್ಗೆ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ.

ಈ ಸುದ್ದಿ ಹತ್ತಿರದಲ್ಲೇ ಇದ್ದ ಗಂಗಾಧರ್ ಮತ್ತು ಅವರ ಕುಟುಂಬಕ್ಕೆ ತಲುಪಿತು. ಯಾವುದೇ ಸಮಸ್ಯೆಯಾಗದಂತೆ ಗಂಗಾಧರ್ ಅಣ್ಣ ಶ್ರೀನಿವಾಸ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗಿದ್ದಾರೆ. ರೈಲ್ವೇ ಹಳಿ ಬಳಿ ಹೋಗುತ್ತಿದ್ದಾಗ ಗಂಗಾಧರ್ ನೀರು ಕುಡಿಯುತ್ತೇನೆ ಎಂದು ಹೇಳಿ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ.

ಗಾಡಿ ನಿಲ್ಲಿಸಿದ ಕೂಡಲೇ ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಸಾವನ್ನಪ್ಪಿದ್ದಾನೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ, ಘಟನೆ ಸಂಬಂಧ ಕಾಮಸಮುದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ಬಾಲಕಿಯ ತಂದೆ ಕೃಷ್ಣಮೂರ್ತಿಯನ್ನು ಬಂಧಿಸಿದ್ದಾರೆ ಎಂದು ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಡಾ ಧರಣಿ ದೇವಿ  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

5 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

5 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

5 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

8 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

8 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

8 hours ago