BREAKING NEWS

ಕೊಳ್ಳೇಗಾಲದ ಹೊಲೆಯ ಮೂದೇವಿಗಳು ನನ್ನನ್ನು ಸೋಲಿಸಿಬಿಟ್ಟರು: ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಶಾಸಕ!

ಚಾಮರಾಜನಗರ: ಅಸೆಂಬ್ಲಿಲಿ ನಾನು ಇರ್ಬೇಕಿತ್ತು, ನಾನೊಬ್ಬನೇ ಮಾತನಾಡುತ್ತಿರುವುದು, ಬೇರಾರು ಮಾತನಾಡುತ್ತಿಲ್ಲ. ಆದರೆ ನನ್ನನ್ನು ಕೊಳ್ಳೇಗಾಲ ಹೊಲೆಯ ಮೂದೇವಿಗಳು ಚುನಾವಣೆಯಲ್ಲಿ ಸೋಲಿಸಿಬಿಟ್ಟರು. ಇದು ಕೊಳ್ಳೇಗಾಲದ ಮಾಜಿ ಶಾಸಕ ಎನ್‌. ಮಹೇಶ್‌ ಅವರ ಮಾತಗಳು.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿರುವ ೧೫ ಸೆಕೆಂಡ್‌ಗಳ ಈ ವೀಡಿಯೋ ತುಣಕು ಚಾಮರಾಜಗರ ಭಾಗದ ದಲಿತರ ಕೋಪಕ್ಕೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಸಿ.ಎನ್‌ ಮಂಜುನಾಥ್‌ ಪರವಾಗಿ ರಾಮನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಮಾತುಗಳನ್ನು ಆಡಿರುವ ಎನ್‌ ಮಹೇಶ್‌ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ಮತಯಾಚನೆ ವೇಳೇ, ಅಸೆಂಬ್ಲಿಯಲ್ಲಿ ದಲಿತರ ಪರವಾಗಿ ನಾನೊಬ್ಬನೇ ಧನಿ ಎತ್ತುತ್ತಿರುವುದು ಆದರೆ, 2023ರ ಚುನಾವಣೆಯಲ್ಲಿ ಹೊಲೆಯ ಮೂದೇವಿಗಳು ನನ್ನನ್ನು ಸೋಲಿಸಿಬಿಟ್ಟರು ಎಂದು ಮೂದಲಿಸಿದ್ದರು. ಈ ಬಗ್ಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದೆ.

ಇನ್ನು ಕೊಳ್ಳೇಗಾಲ ತಾಲೂಕಿನಾದ್ಯಂತ ಅಣ್ಣ ಎನ್‌ ಮಹೇಶ್‌ ವಿರುದ್ಧ ಹಲವಾರು ಸುದ್ಧಿಗೋಷ್ಠಿಗಳು, ಪ್ರತಿಭಟನೆಗಳು ನಡೆಯುತ್ತಿವೆ. ಎಲ್ಲಾ ದಲಿತ ಮುಖಂಡರು ಎನ್‌ ಮಹೇಶ ಹೇಳಿಕೆ ಖಂಡಿಸಿ ಅವರನ್ನು ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.

ಹೇಳಿಕೆಗೆ ಕ್ಷಮೆಯಾಚಿಸಿದ ಮಾಜಿ ಶಾಸಕ ಎನ್‌ ಮಹೇಶ್‌: ಮಾಜಿ ಶಾಸಕ ಎನ್‌. ಮಹೇಶ್‌ ಹೇಳಿಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆ, ಇದರಿಂದ ಏ.೨೬ ರಂದು ನಡೆಯುವ ಚುನಾವಣೆಗೆ ತೊಡಕಾಗಬಹುದು ಎಂದು ಮನಗಂಡ ಮಹೇಶ್‌ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಈ ಸಂಬಂಧ ನಿನ್ನೆ (ಏ.೨೧) ರಾತ್ರಿ ಫೇಸ್‌ಬುಕ್‌ ಲೈವ್‌ನಲ್ಲಿ ಬಂದು ಮಾತನಾಡಿರುವ ಅವರು, ನಮ್ಮವರು ಎಂಬ ಹಕ್ಕಿನಿಂದಾಗಿ ನಾನು ಈ ರೀತಿ ಮಾತನಾಡಿದ್ದೇನೆ. ಇದರಿಂದ ನಿಮಲ್ಲರಿಗೂ ನೋವಾಗಿದ್ದರೇ ಕ್ಷಮೆ ಕೇಳುತ್ತೇನೆ. ನಾನು ಇಂತಹ ಅವಮಾನವನ್ನು ನಿನ್ನೆ ಮೊನ್ನೆಯಿಂದ ಅನುಭವಿಸುತ್ತಿಲ್ಲ. ಕಳೆದ ೨೦ ವರ್ಷಗಳಿಂದ ಅನುಭವಿಸುತ್ತಾ ಬಂದಿದ್ದೇನೆ. ಆದರೆ, ಈ ಎಲ್ಲಾ ಅವಮಾನವನ್ನು ನನಗೆ ನೀಡಿದವರು ನಮ್ಮವರೇ ಹೊರತು ಬೇರಾರು ಅಲ್ಲಾ ಎಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸೆರೆ ಹಿಡಿದ ಹುಲಿಗಳನ್ನು ಬಿಆರ್‌ಟಿ ಅರಣ್ಯಕ್ಕೆ ಬಿಡದಂತೆ ಸಂಸದ ಸುನೀಲ್‌ ಬೋಸ್‌ ಸೂಚನೆ

ಮಹಾದೇಶ್‌ ಎಂ ಗೌಡ  ಹನೂರು: ನಂಜದೇವನಪುರ ಗ್ರಾಮದಲ್ಲಿ ಸೆರೆಹಿಡಿದಿರುವ ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ…

8 mins ago

ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ: ಓರ್ವ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಸ್ಪೀಪರ್‌ ಕೋಚ್‌ ಬಸ್‌ ಕಂಟೇನರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…

1 hour ago

ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು…

2 hours ago

ಮೈಸೂರು-ಬೆಂಗಳೂರು ಮೇಲ್ಸೇತುವೆ ಕಾಮಗಾರಿ ಪ್ರಕ್ರಿಯೆ ಆರಂಭ: ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯ ಮಣಿಪಾಲ್‌ ಜಂಕ್ಷನ್‌ ಫ್ಲೈಓವರ್‌…

2 hours ago

ಮಡಿಕೇರಿ| ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ

ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್‌…

2 hours ago

ಕಾರು ಹರಿದು ನಾಟಕ ನೋಡಿ ಮಲಗಿದ್ದ ವ್ಯಕ್ತಿ ಸಾವು

ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…

3 hours ago