ಚಾಮರಾಜನಗರ: ಅಸೆಂಬ್ಲಿಲಿ ನಾನು ಇರ್ಬೇಕಿತ್ತು, ನಾನೊಬ್ಬನೇ ಮಾತನಾಡುತ್ತಿರುವುದು, ಬೇರಾರು ಮಾತನಾಡುತ್ತಿಲ್ಲ. ಆದರೆ ನನ್ನನ್ನು ಕೊಳ್ಳೇಗಾಲ ಹೊಲೆಯ ಮೂದೇವಿಗಳು ಚುನಾವಣೆಯಲ್ಲಿ ಸೋಲಿಸಿಬಿಟ್ಟರು. ಇದು ಕೊಳ್ಳೇಗಾಲದ ಮಾಜಿ ಶಾಸಕ ಎನ್. ಮಹೇಶ್ ಅವರ ಮಾತಗಳು.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿರುವ ೧೫ ಸೆಕೆಂಡ್ಗಳ ಈ ವೀಡಿಯೋ ತುಣಕು ಚಾಮರಾಜಗರ ಭಾಗದ ದಲಿತರ ಕೋಪಕ್ಕೆ ಕಾರಣವಾಗಿದೆ.
ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಸಿ.ಎನ್ ಮಂಜುನಾಥ್ ಪರವಾಗಿ ರಾಮನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಮಾತುಗಳನ್ನು ಆಡಿರುವ ಎನ್ ಮಹೇಶ್ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಮತಯಾಚನೆ ವೇಳೇ, ಅಸೆಂಬ್ಲಿಯಲ್ಲಿ ದಲಿತರ ಪರವಾಗಿ ನಾನೊಬ್ಬನೇ ಧನಿ ಎತ್ತುತ್ತಿರುವುದು ಆದರೆ, 2023ರ ಚುನಾವಣೆಯಲ್ಲಿ ಹೊಲೆಯ ಮೂದೇವಿಗಳು ನನ್ನನ್ನು ಸೋಲಿಸಿಬಿಟ್ಟರು ಎಂದು ಮೂದಲಿಸಿದ್ದರು. ಈ ಬಗ್ಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದೆ.
ಇನ್ನು ಕೊಳ್ಳೇಗಾಲ ತಾಲೂಕಿನಾದ್ಯಂತ ಅಣ್ಣ ಎನ್ ಮಹೇಶ್ ವಿರುದ್ಧ ಹಲವಾರು ಸುದ್ಧಿಗೋಷ್ಠಿಗಳು, ಪ್ರತಿಭಟನೆಗಳು ನಡೆಯುತ್ತಿವೆ. ಎಲ್ಲಾ ದಲಿತ ಮುಖಂಡರು ಎನ್ ಮಹೇಶ ಹೇಳಿಕೆ ಖಂಡಿಸಿ ಅವರನ್ನು ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.
ಹೇಳಿಕೆಗೆ ಕ್ಷಮೆಯಾಚಿಸಿದ ಮಾಜಿ ಶಾಸಕ ಎನ್ ಮಹೇಶ್: ಮಾಜಿ ಶಾಸಕ ಎನ್. ಮಹೇಶ್ ಹೇಳಿಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆ, ಇದರಿಂದ ಏ.೨೬ ರಂದು ನಡೆಯುವ ಚುನಾವಣೆಗೆ ತೊಡಕಾಗಬಹುದು ಎಂದು ಮನಗಂಡ ಮಹೇಶ್ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ.
ಈ ಸಂಬಂಧ ನಿನ್ನೆ (ಏ.೨೧) ರಾತ್ರಿ ಫೇಸ್ಬುಕ್ ಲೈವ್ನಲ್ಲಿ ಬಂದು ಮಾತನಾಡಿರುವ ಅವರು, ನಮ್ಮವರು ಎಂಬ ಹಕ್ಕಿನಿಂದಾಗಿ ನಾನು ಈ ರೀತಿ ಮಾತನಾಡಿದ್ದೇನೆ. ಇದರಿಂದ ನಿಮಲ್ಲರಿಗೂ ನೋವಾಗಿದ್ದರೇ ಕ್ಷಮೆ ಕೇಳುತ್ತೇನೆ. ನಾನು ಇಂತಹ ಅವಮಾನವನ್ನು ನಿನ್ನೆ ಮೊನ್ನೆಯಿಂದ ಅನುಭವಿಸುತ್ತಿಲ್ಲ. ಕಳೆದ ೨೦ ವರ್ಷಗಳಿಂದ ಅನುಭವಿಸುತ್ತಾ ಬಂದಿದ್ದೇನೆ. ಆದರೆ, ಈ ಎಲ್ಲಾ ಅವಮಾನವನ್ನು ನನಗೆ ನೀಡಿದವರು ನಮ್ಮವರೇ ಹೊರತು ಬೇರಾರು ಅಲ್ಲಾ ಎಂದು ಹೇಳಿದ್ದಾರೆ.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…