ಚಾಮರಾಜನಗರ: ಅಸೆಂಬ್ಲಿಲಿ ನಾನು ಇರ್ಬೇಕಿತ್ತು, ನಾನೊಬ್ಬನೇ ಮಾತನಾಡುತ್ತಿರುವುದು, ಬೇರಾರು ಮಾತನಾಡುತ್ತಿಲ್ಲ. ಆದರೆ ನನ್ನನ್ನು ಕೊಳ್ಳೇಗಾಲ ಹೊಲೆಯ ಮೂದೇವಿಗಳು ಚುನಾವಣೆಯಲ್ಲಿ ಸೋಲಿಸಿಬಿಟ್ಟರು. ಇದು ಕೊಳ್ಳೇಗಾಲದ ಮಾಜಿ ಶಾಸಕ ಎನ್. ಮಹೇಶ್ ಅವರ ಮಾತಗಳು.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿರುವ ೧೫ ಸೆಕೆಂಡ್ಗಳ ಈ ವೀಡಿಯೋ ತುಣಕು ಚಾಮರಾಜಗರ ಭಾಗದ ದಲಿತರ ಕೋಪಕ್ಕೆ ಕಾರಣವಾಗಿದೆ.
ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಸಿ.ಎನ್ ಮಂಜುನಾಥ್ ಪರವಾಗಿ ರಾಮನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಮಾತುಗಳನ್ನು ಆಡಿರುವ ಎನ್ ಮಹೇಶ್ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಮತಯಾಚನೆ ವೇಳೇ, ಅಸೆಂಬ್ಲಿಯಲ್ಲಿ ದಲಿತರ ಪರವಾಗಿ ನಾನೊಬ್ಬನೇ ಧನಿ ಎತ್ತುತ್ತಿರುವುದು ಆದರೆ, 2023ರ ಚುನಾವಣೆಯಲ್ಲಿ ಹೊಲೆಯ ಮೂದೇವಿಗಳು ನನ್ನನ್ನು ಸೋಲಿಸಿಬಿಟ್ಟರು ಎಂದು ಮೂದಲಿಸಿದ್ದರು. ಈ ಬಗ್ಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದೆ.
ಇನ್ನು ಕೊಳ್ಳೇಗಾಲ ತಾಲೂಕಿನಾದ್ಯಂತ ಅಣ್ಣ ಎನ್ ಮಹೇಶ್ ವಿರುದ್ಧ ಹಲವಾರು ಸುದ್ಧಿಗೋಷ್ಠಿಗಳು, ಪ್ರತಿಭಟನೆಗಳು ನಡೆಯುತ್ತಿವೆ. ಎಲ್ಲಾ ದಲಿತ ಮುಖಂಡರು ಎನ್ ಮಹೇಶ ಹೇಳಿಕೆ ಖಂಡಿಸಿ ಅವರನ್ನು ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.
ಹೇಳಿಕೆಗೆ ಕ್ಷಮೆಯಾಚಿಸಿದ ಮಾಜಿ ಶಾಸಕ ಎನ್ ಮಹೇಶ್: ಮಾಜಿ ಶಾಸಕ ಎನ್. ಮಹೇಶ್ ಹೇಳಿಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆ, ಇದರಿಂದ ಏ.೨೬ ರಂದು ನಡೆಯುವ ಚುನಾವಣೆಗೆ ತೊಡಕಾಗಬಹುದು ಎಂದು ಮನಗಂಡ ಮಹೇಶ್ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ.
ಈ ಸಂಬಂಧ ನಿನ್ನೆ (ಏ.೨೧) ರಾತ್ರಿ ಫೇಸ್ಬುಕ್ ಲೈವ್ನಲ್ಲಿ ಬಂದು ಮಾತನಾಡಿರುವ ಅವರು, ನಮ್ಮವರು ಎಂಬ ಹಕ್ಕಿನಿಂದಾಗಿ ನಾನು ಈ ರೀತಿ ಮಾತನಾಡಿದ್ದೇನೆ. ಇದರಿಂದ ನಿಮಲ್ಲರಿಗೂ ನೋವಾಗಿದ್ದರೇ ಕ್ಷಮೆ ಕೇಳುತ್ತೇನೆ. ನಾನು ಇಂತಹ ಅವಮಾನವನ್ನು ನಿನ್ನೆ ಮೊನ್ನೆಯಿಂದ ಅನುಭವಿಸುತ್ತಿಲ್ಲ. ಕಳೆದ ೨೦ ವರ್ಷಗಳಿಂದ ಅನುಭವಿಸುತ್ತಾ ಬಂದಿದ್ದೇನೆ. ಆದರೆ, ಈ ಎಲ್ಲಾ ಅವಮಾನವನ್ನು ನನಗೆ ನೀಡಿದವರು ನಮ್ಮವರೇ ಹೊರತು ಬೇರಾರು ಅಲ್ಲಾ ಎಂದು ಹೇಳಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…