BREAKING NEWS

ಕೊಳ್ಳೇಗಾಲದ ಹೊಲೆಯ ಮೂದೇವಿಗಳು ನನ್ನನ್ನು ಸೋಲಿಸಿಬಿಟ್ಟರು: ವಿವಾದಾತ್ಮಕ ಹೇಳಿಕೆ ಕೊಟ್ಟ ಮಾಜಿ ಶಾಸಕ!

ಚಾಮರಾಜನಗರ: ಅಸೆಂಬ್ಲಿಲಿ ನಾನು ಇರ್ಬೇಕಿತ್ತು, ನಾನೊಬ್ಬನೇ ಮಾತನಾಡುತ್ತಿರುವುದು, ಬೇರಾರು ಮಾತನಾಡುತ್ತಿಲ್ಲ. ಆದರೆ ನನ್ನನ್ನು ಕೊಳ್ಳೇಗಾಲ ಹೊಲೆಯ ಮೂದೇವಿಗಳು ಚುನಾವಣೆಯಲ್ಲಿ ಸೋಲಿಸಿಬಿಟ್ಟರು. ಇದು ಕೊಳ್ಳೇಗಾಲದ ಮಾಜಿ ಶಾಸಕ ಎನ್‌. ಮಹೇಶ್‌ ಅವರ ಮಾತಗಳು.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗುತ್ತಿರುವ ೧೫ ಸೆಕೆಂಡ್‌ಗಳ ಈ ವೀಡಿಯೋ ತುಣಕು ಚಾಮರಾಜಗರ ಭಾಗದ ದಲಿತರ ಕೋಪಕ್ಕೆ ಕಾರಣವಾಗಿದೆ.

ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಸಿ.ಎನ್‌ ಮಂಜುನಾಥ್‌ ಪರವಾಗಿ ರಾಮನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಈ ಮಾತುಗಳನ್ನು ಆಡಿರುವ ಎನ್‌ ಮಹೇಶ್‌ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ಮತಯಾಚನೆ ವೇಳೇ, ಅಸೆಂಬ್ಲಿಯಲ್ಲಿ ದಲಿತರ ಪರವಾಗಿ ನಾನೊಬ್ಬನೇ ಧನಿ ಎತ್ತುತ್ತಿರುವುದು ಆದರೆ, 2023ರ ಚುನಾವಣೆಯಲ್ಲಿ ಹೊಲೆಯ ಮೂದೇವಿಗಳು ನನ್ನನ್ನು ಸೋಲಿಸಿಬಿಟ್ಟರು ಎಂದು ಮೂದಲಿಸಿದ್ದರು. ಈ ಬಗ್ಗೆ ವ್ಯಾಪಕವಾಗಿ ವಿರೋಧ ವ್ಯಕ್ತವಾಗುತ್ತಿದೆ.

ಇನ್ನು ಕೊಳ್ಳೇಗಾಲ ತಾಲೂಕಿನಾದ್ಯಂತ ಅಣ್ಣ ಎನ್‌ ಮಹೇಶ್‌ ವಿರುದ್ಧ ಹಲವಾರು ಸುದ್ಧಿಗೋಷ್ಠಿಗಳು, ಪ್ರತಿಭಟನೆಗಳು ನಡೆಯುತ್ತಿವೆ. ಎಲ್ಲಾ ದಲಿತ ಮುಖಂಡರು ಎನ್‌ ಮಹೇಶ ಹೇಳಿಕೆ ಖಂಡಿಸಿ ಅವರನ್ನು ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.

ಹೇಳಿಕೆಗೆ ಕ್ಷಮೆಯಾಚಿಸಿದ ಮಾಜಿ ಶಾಸಕ ಎನ್‌ ಮಹೇಶ್‌: ಮಾಜಿ ಶಾಸಕ ಎನ್‌. ಮಹೇಶ್‌ ಹೇಳಿಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆ, ಇದರಿಂದ ಏ.೨೬ ರಂದು ನಡೆಯುವ ಚುನಾವಣೆಗೆ ತೊಡಕಾಗಬಹುದು ಎಂದು ಮನಗಂಡ ಮಹೇಶ್‌ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದ್ದಾರೆ.

ಈ ಸಂಬಂಧ ನಿನ್ನೆ (ಏ.೨೧) ರಾತ್ರಿ ಫೇಸ್‌ಬುಕ್‌ ಲೈವ್‌ನಲ್ಲಿ ಬಂದು ಮಾತನಾಡಿರುವ ಅವರು, ನಮ್ಮವರು ಎಂಬ ಹಕ್ಕಿನಿಂದಾಗಿ ನಾನು ಈ ರೀತಿ ಮಾತನಾಡಿದ್ದೇನೆ. ಇದರಿಂದ ನಿಮಲ್ಲರಿಗೂ ನೋವಾಗಿದ್ದರೇ ಕ್ಷಮೆ ಕೇಳುತ್ತೇನೆ. ನಾನು ಇಂತಹ ಅವಮಾನವನ್ನು ನಿನ್ನೆ ಮೊನ್ನೆಯಿಂದ ಅನುಭವಿಸುತ್ತಿಲ್ಲ. ಕಳೆದ ೨೦ ವರ್ಷಗಳಿಂದ ಅನುಭವಿಸುತ್ತಾ ಬಂದಿದ್ದೇನೆ. ಆದರೆ, ಈ ಎಲ್ಲಾ ಅವಮಾನವನ್ನು ನನಗೆ ನೀಡಿದವರು ನಮ್ಮವರೇ ಹೊರತು ಬೇರಾರು ಅಲ್ಲಾ ಎಂದು ಹೇಳಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

7 mins ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

6 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago