BREAKING NEWS

ಪ್ರೊ. ಎಂ. ಎಚ್. ಕೃಷ್ಣಯ್ಯ ಇನ್ನಿಲ್ಲ

ಮೈಸೂರು :ಕನ್ನಡ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊಫೆಸರ್ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ.

ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ ಒಂದು ಗಂಟೆ ವೇಳೆಗೆ ನಿಧನರಾಗಿತ್ತು ಅವರ ಅಂತ್ಯ ಸಂಸ್ಕಾರವು ಗಾಯತ್ರಿ ನಗರದ ಹರಿಶ್ಚಂದ್ರ ಘಾಟಿನಲ್ಲಿ 11 ಗಂಟೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಕೃಷ್ಣಯ್ಯ ಅವರು ಕನ್ನಡ ಸಾಹಿತ್ಯ ಪೋಷಕರಾಗಿ ಕನ್ನಡ ಸಾಹಿತ್ಯ ಅಕಾಡೆಮಿ ಒಳಗೊಂಡಂತೆ ಹಲವಾರು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರ. ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್, ಸಾಹಿತ್ಯ ಸಾಂಸ್ಕೃತಿಕ ಲೋಕದಲ್ಲಿ ಮಹತ್ವವಾದ ಸೇವೆ ಸಲ್ಲಿಸಿರುವ ಕೃಷ್ಣಯ್ಯ ಅವರು ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿದ್ದರು. ಇವರಿಗೆ ಶೃಂಗಾರ ಲಹರಿಗೆ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ.

ಕೃಷ್ಣಯ್ಯ ಅವರು ಜುಲೈ 21 1937 ರಲ್ಲಿ ಮೈಸೂರಿನಲ್ಲಿ ಜನಿಸಿದರು. ತಂದೆ ಹುಚ್ಚಯ್ಯ, ತಾಯಿ ಕೆಂಪಮ್ಮ, ಮೈಸೂರು ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿಗಳನ್ನು ಪಡೆದ ಕೃಷ್ಣಯ್ಯ ಅವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ ,ಮಂಗಳೂರು, ಮಾಗಡಿ ಮುಂತಾದ ಕಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದರು.

ಉದಯ ಬಾನು ಕಲಾ ಸಂಘವು ತನ್ನ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಕೊರತಂದ ಸುಮಾರು 3000 ಪುಟಗಳ ಬೆಂಗಳೂರು ದರ್ಶನ ಬೃಹತ್ ಸಂಪುಟಗಳ ಸಂಪಾದಕರಾಗಿಯೂ ಸಹ ತಮ್ಮ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ.

ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ನಿವೃತ್ತ ಪ್ರಾಧ್ಯಾಪಕರು ಕೂಡ ಆಗಿದ್ದರು. 30ಕ್ಕಿಂತಲೂ ಅಧಿಕ ಕೃತಿಗಳನ್ನು ಪ್ರಕಟಿಸಿದ್ದಾರೆ.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

12 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

13 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

13 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

13 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

14 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

22 hours ago