BREAKING NEWS

ಪ್ರೊ. ಎಂ. ಎಚ್. ಕೃಷ್ಣಯ್ಯ ಇನ್ನಿಲ್ಲ

ಮೈಸೂರು :ಕನ್ನಡ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊಫೆಸರ್ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ.

ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ ಒಂದು ಗಂಟೆ ವೇಳೆಗೆ ನಿಧನರಾಗಿತ್ತು ಅವರ ಅಂತ್ಯ ಸಂಸ್ಕಾರವು ಗಾಯತ್ರಿ ನಗರದ ಹರಿಶ್ಚಂದ್ರ ಘಾಟಿನಲ್ಲಿ 11 ಗಂಟೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಕೃಷ್ಣಯ್ಯ ಅವರು ಕನ್ನಡ ಸಾಹಿತ್ಯ ಪೋಷಕರಾಗಿ ಕನ್ನಡ ಸಾಹಿತ್ಯ ಅಕಾಡೆಮಿ ಒಳಗೊಂಡಂತೆ ಹಲವಾರು ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಪುಸ್ತಕ ಪ್ರಾಧಿಕಾರ. ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್, ಸಾಹಿತ್ಯ ಸಾಂಸ್ಕೃತಿಕ ಲೋಕದಲ್ಲಿ ಮಹತ್ವವಾದ ಸೇವೆ ಸಲ್ಲಿಸಿರುವ ಕೃಷ್ಣಯ್ಯ ಅವರು ಸರಳ ಸಜ್ಜನಿಕೆಗೆ ಹೆಸರುವಾಸಿಯಾಗಿದ್ದರು. ಇವರಿಗೆ ಶೃಂಗಾರ ಲಹರಿಗೆ ಲಲಿತ ಕಲಾ ಅಕಾಡೆಮಿ ಪುರಸ್ಕಾರ, ಸಂಕ್ಷಿಪ್ತ ಕನ್ನಡ ಭಾಷೆಯ ಚರಿತ್ರೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ.

ಕೃಷ್ಣಯ್ಯ ಅವರು ಜುಲೈ 21 1937 ರಲ್ಲಿ ಮೈಸೂರಿನಲ್ಲಿ ಜನಿಸಿದರು. ತಂದೆ ಹುಚ್ಚಯ್ಯ, ತಾಯಿ ಕೆಂಪಮ್ಮ, ಮೈಸೂರು ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿಗಳನ್ನು ಪಡೆದ ಕೃಷ್ಣಯ್ಯ ಅವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ ,ಮಂಗಳೂರು, ಮಾಗಡಿ ಮುಂತಾದ ಕಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದರು.

ಉದಯ ಬಾನು ಕಲಾ ಸಂಘವು ತನ್ನ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ಕೊರತಂದ ಸುಮಾರು 3000 ಪುಟಗಳ ಬೆಂಗಳೂರು ದರ್ಶನ ಬೃಹತ್ ಸಂಪುಟಗಳ ಸಂಪಾದಕರಾಗಿಯೂ ಸಹ ತಮ್ಮ ಮಹತ್ವದ ಕೊಡುಗೆಯನ್ನು ನೀಡಿದ್ದಾರೆ.

ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮತ್ತು ನಿವೃತ್ತ ಪ್ರಾಧ್ಯಾಪಕರು ಕೂಡ ಆಗಿದ್ದರು. 30ಕ್ಕಿಂತಲೂ ಅಧಿಕ ಕೃತಿಗಳನ್ನು ಪ್ರಕಟಿಸಿದ್ದಾರೆ.

andolanait

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

5 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

13 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

13 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

13 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

13 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

13 hours ago