BREAKING NEWS

ಕೆಎಸ್ಆರ್‌ಟಿಸಿ ಚಾಲಕ ಆತ್ಮಹತ್ಯೆ ಯತ್ನ| ವೈಯಕ್ತಿಕ ಕಾರಣ ಹೊರತು ರಾಜಕೀಯ ಪ್ರಚೋದನೆ ಇಲ್ಲ: ಸಿಐಡಿ ವರದಿ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕೆ.ಎಸ್ ಆರ್ ಟಿ.ಸಿ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ವೈಯಕ್ತಿಕ ಕಾರಣವೇ ಹೊರತು ರಾಜಕೀಯ ಒತ್ತಡ ಅಥವಾ ಪ್ರಚೋದನೆ ಇಲ್ಲ ಎಂದು ಸಿಐಡಿ ವರದಿ ನೀಡಿದೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ವಹಿಸಲಾಗಿತ್ತು‌. ಸದನದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಸಚಿವ ಚೆಲುವರಾಯಸ್ವಾಮಿ ನಡುವಿನ ವಾಗ್ಯುದ್ಧಕ್ಕೂ ಕಾರಣವಾಗಿತ್ತು.

ಈ ಬಗ್ಗೆ ಸಿಐಡಿ ತನಿಖಾ‌ ತಂಡದ ವರದಿಯ ವಿವರವನ್ನು ಸದನದಲ್ಲಿ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, 38 ಸಾಕ್ಷಿಗಳನ್ನು ಸಿಐಡಿ ತನಿಖಾ ತಂಡ‌ ವಿಚಾರಣೆ ನಡೆಸಿತ್ತು. ಇದು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಯತ್ನ ಎಂದು ಸಿಐಡಿ ವರದಿ ನೀಡಿದೆ. ಯಾವುದೇ ರಾಜಕೀಯ, ಮಾನಸಿಕ ಒತ್ತಡದಿಂದಲ್ಲ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದರು.

ವರ್ಗಾವಣೆ ರದ್ದು ಪಡಿಸಲು ಒತ್ತಡ ಹೇರುವ ನಿಟ್ಟಿನಲ್ಲಿ ಕೀಟನಾಶಕ ಸೇವನೆಯನ್ನು ಚಾಲಕ ಮಾಡಿದ್ದಾನೆ.
ಚಾಲಕ ಜಗದೀಶ್ ಹಾಗೂ ಸುಸೈಡ್ ನೋಟ್ ಬರೆದು ಕೊಟ್ಟ ಚಾಲಕ ನವೀನ್ ಕುಮಾರ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ‌.

ಸಹಾಯಕ ಕಾರ್ಯ ಅಧೀಕ್ಷಕ ಮಂಜುನಾಥ್ ಎಸ್ ಎಲ್ ವಿರುದ್ಧ ಇಲಾಖೆ ಶಿಸ್ತು ಕ್ರಮಕ್ಕೆ ತನಿಖಾ‌ ತಂಡ ಶಿಫಾರಸು ಮಾಡಿದೆ. ಚಾಲಕ ಇದ್ದ ಆಂಬ್ಯುಲೆನ್ಸ್ ತಡೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿಐಡಿ ಶಿಪಾರಸು ಮಾಡಿದೆ ಎಂದು ಸದನಕ್ಕೆ ತಿಳಿಸಿದರು. ಹಾಗೂ ಈ ಬಗ್ಗೆ ಕ್ರಮ ಕೈಗೊಳ್ಳದ ಠಾಣಾಧಿಕಾರಿ ಅಶೋಕ್ ಕುಮಾರ್ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡಿದೆ ಎಂದು ಮಾಹಿತಿಯನ್ನು ನೀಡಿದರು‌.

ಆದರೆ ವರದಿ ಬಗ್ಗೆ ಕಾಂಗ್ರೆಸ್ ಸದಸ್ಯ ನರೇಂದ್ರ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ,‌ವರದಿ ನ್ಯಾಯೋಚಿತವಾಗಿಲ್ಲ.ಇದರಲ್ಲಿ ಯಾರನ್ನೋ ರಕ್ಷಣೆ ಮಾಡುವ ಉದ್ದೇಶ ಇದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಶಾಸಕರ ಮಾನ ಮರ್ಯಾದೆ ಕಳೆದಿದ್ದಾರೆ. ಕುಮಾರಸ್ವಾಮಿ ಏನು ದೇವರಾ? ಅವರ ಬಗ್ಗೆ ನಾವು ಮಾತನಾಡಬಾರದಾ? ಅವರು ಮಾಜಿ ಸಿಎಂ ಎಂದು ನಮಗೂ ಗೌರವ ಇದೆ. ಆದರೆ ಇಲ್ಲಸಲ್ಲದ ಆರೋಪ ಮಾಡಿದರೆ ಹೇಗೆ? ನಾವು ಹೇಗೆ ತಡೆದುಕೊಳ್ಳಬೇಕು? ವರದಿಯಲ್ಲಿ ಅಧಿಕಾರಿಗಳು ಯಾರನ್ನೂ ಉಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.

andolanait

Recent Posts

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

23 mins ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

26 mins ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

1 hour ago

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳ ಪರದಾಟ

ಎಚ್.ಡಿ.ಕೋಟೆ: ಬಸ್‌ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…

1 hour ago

ನಿರ್ಮಲಾನಂದನಾಥ ಶ್ರೀಗಳ ಸಮ್ಮುಖದಲ್ಲೇ ಬಹಿರಂಗವಾಗಿ ಕ್ಷಮೆಯಾಚಿಸಿದ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…

1 hour ago

ಸರ್ಕಾರದ ವೈಫಲ್ಯದ ವಿರುದ್ಧ ಕೈ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದ್ರೂ ಅಚ್ಚರಿಯಿಲ್ಲ: ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…

2 hours ago