ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕೆ.ಎಸ್ ಆರ್ ಟಿ.ಸಿ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ವೈಯಕ್ತಿಕ ಕಾರಣವೇ ಹೊರತು ರಾಜಕೀಯ ಒತ್ತಡ ಅಥವಾ ಪ್ರಚೋದನೆ ಇಲ್ಲ ಎಂದು ಸಿಐಡಿ ವರದಿ ನೀಡಿದೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಈ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ವಹಿಸಲಾಗಿತ್ತು. ಸದನದಲ್ಲಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹಾಗೂ ಸಚಿವ ಚೆಲುವರಾಯಸ್ವಾಮಿ ನಡುವಿನ ವಾಗ್ಯುದ್ಧಕ್ಕೂ ಕಾರಣವಾಗಿತ್ತು.
ಈ ಬಗ್ಗೆ ಸಿಐಡಿ ತನಿಖಾ ತಂಡದ ವರದಿಯ ವಿವರವನ್ನು ಸದನದಲ್ಲಿ ನೀಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, 38 ಸಾಕ್ಷಿಗಳನ್ನು ಸಿಐಡಿ ತನಿಖಾ ತಂಡ ವಿಚಾರಣೆ ನಡೆಸಿತ್ತು. ಇದು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಯತ್ನ ಎಂದು ಸಿಐಡಿ ವರದಿ ನೀಡಿದೆ. ಯಾವುದೇ ರಾಜಕೀಯ, ಮಾನಸಿಕ ಒತ್ತಡದಿಂದಲ್ಲ ಎಂದು ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ ಎಂದರು.
ವರ್ಗಾವಣೆ ರದ್ದು ಪಡಿಸಲು ಒತ್ತಡ ಹೇರುವ ನಿಟ್ಟಿನಲ್ಲಿ ಕೀಟನಾಶಕ ಸೇವನೆಯನ್ನು ಚಾಲಕ ಮಾಡಿದ್ದಾನೆ.
ಚಾಲಕ ಜಗದೀಶ್ ಹಾಗೂ ಸುಸೈಡ್ ನೋಟ್ ಬರೆದು ಕೊಟ್ಟ ಚಾಲಕ ನವೀನ್ ಕುಮಾರ್ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದೆ.
ಸಹಾಯಕ ಕಾರ್ಯ ಅಧೀಕ್ಷಕ ಮಂಜುನಾಥ್ ಎಸ್ ಎಲ್ ವಿರುದ್ಧ ಇಲಾಖೆ ಶಿಸ್ತು ಕ್ರಮಕ್ಕೆ ತನಿಖಾ ತಂಡ ಶಿಫಾರಸು ಮಾಡಿದೆ. ಚಾಲಕ ಇದ್ದ ಆಂಬ್ಯುಲೆನ್ಸ್ ತಡೆದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಿಐಡಿ ಶಿಪಾರಸು ಮಾಡಿದೆ ಎಂದು ಸದನಕ್ಕೆ ತಿಳಿಸಿದರು. ಹಾಗೂ ಈ ಬಗ್ಗೆ ಕ್ರಮ ಕೈಗೊಳ್ಳದ ಠಾಣಾಧಿಕಾರಿ ಅಶೋಕ್ ಕುಮಾರ್ ವಿರುದ್ಧವೂ ಕ್ರಮಕ್ಕೆ ಶಿಫಾರಸು ಮಾಡಿದೆ ಎಂದು ಮಾಹಿತಿಯನ್ನು ನೀಡಿದರು.
ಆದರೆ ವರದಿ ಬಗ್ಗೆ ಕಾಂಗ್ರೆಸ್ ಸದಸ್ಯ ನರೇಂದ್ರ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ,ವರದಿ ನ್ಯಾಯೋಚಿತವಾಗಿಲ್ಲ.ಇದರಲ್ಲಿ ಯಾರನ್ನೋ ರಕ್ಷಣೆ ಮಾಡುವ ಉದ್ದೇಶ ಇದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ಶಾಸಕರ ಮಾನ ಮರ್ಯಾದೆ ಕಳೆದಿದ್ದಾರೆ. ಕುಮಾರಸ್ವಾಮಿ ಏನು ದೇವರಾ? ಅವರ ಬಗ್ಗೆ ನಾವು ಮಾತನಾಡಬಾರದಾ? ಅವರು ಮಾಜಿ ಸಿಎಂ ಎಂದು ನಮಗೂ ಗೌರವ ಇದೆ. ಆದರೆ ಇಲ್ಲಸಲ್ಲದ ಆರೋಪ ಮಾಡಿದರೆ ಹೇಗೆ? ನಾವು ಹೇಗೆ ತಡೆದುಕೊಳ್ಳಬೇಕು? ವರದಿಯಲ್ಲಿ ಅಧಿಕಾರಿಗಳು ಯಾರನ್ನೂ ಉಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…