BREAKING NEWS

ಖ್ಯಾತ ಕಥೆಗಾರ, ಸಂಘಟಕ ಕುಕ್ಕರಹಳ್ಳಿ ಬಸವರಾಜು ಇನ್ನಿಲ್ಲ

ಮೈಸೂರು : ಖ್ಯಾತ ಕಥೆಗಾರ, ಲೇಖಕ, ರಂಗಕರ್ಮಿ ಕುಕ್ಕರಹಳ್ಳಿ ಬಸವರಾಜು (02 Oct 1955)  ಅವರು ಗುರುವಾರ ಮೈಸೂರಿನ ರಾಮಕೃಷ್ಣನಗರದ ತಮ್ಮ ನಿವಾಸದಲ್ಲಿ  ನಿಧನರಾಗಿದ್ದಾರೆ. ಅವರಿಗೆ  67 ವರ್ಷ ವಯಸ್ಸಾಗಿತ್ತು.

ಮೈಸೂರು ನಗರದ ಭಾಗವಾಗಿರುವ ಕುಕ್ಕರಹಳ್ಳಿಯಲ್ಲಿ ಧನಗಳ್ಳಿ ಸಿದ್ಧಯ್ಯ ಮತ್ತು- ನಿಂಗಮ್ಮದಂಪತಿಯ ಮಗನಾಗಿ ಜನಿಸಿದ ಬಸವರಾಜು ಅವರು ಬಹುಮುಖ ಪ್ರತಿಭೆ. ಗ್ರಂಥಾಲಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದು ಅವರು ಮೈಸೂರಿನ ಮಹಾರಾಜ ಪದವಿ ಪೂರ್ವ ಕಾಲೇಜು ಮತ್ತು ಮರಿಮಲ್ಲಪ್ಪನವರ ಪದವಿ ಪೂರ್ವ ಕಾಲೇಜಿನಲ್ಲಿ ಗ್ರಂಥಪಾಲಕರಾಗಿ ಕಾರ್ಯನಿರ್ವಹಿಸಿದ್ದರು. ಪದವಿ ಓದುತ್ತಿದ್ದಾಗಲೇ “ಸ್ಟೂಡೆಂಟ್ ಫಾರ್ ಡೆಮಾಕ್ರಸಿʼ ವಿದ್ಯಾರ್ಥಿ ಸಂಘಟನೆಯ ಕಾರ್ಯದರ್ಶಿಯಾಗಿ ದುಡಿದಿದ್ದರು. ಎಂಸಿಡಿಸಿಸಿ ಬ್ಯಾಂಕ್ ನ ಸೀನಿಯರ್ ಮ್ಯಾನೇಜರ್ ಅನೂಪ್ ಎಸ್.ಬಸು ಇವರ ಪುತ್ರರಾಗಿದ್ದಾರೆ. ಇವರ ಅಂತ್ಯಕ್ರಿಯೆಯು ನಾಳೆ ( ಶುಕ್ರವಾರ) ಬೆಳಿಗ್ಗೆ ೧೦ ಗಂಟೆಗೆ ಚಾಮುಂಡಿಬೆಟ್ಟದ ವಿದ್ಯುತ್ ಚಿತಾಗಾರದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರವೃತ್ತಿಯಲ್ಲಿ ಕಥೆಗಾರರಾಗಿರುವ ಅವರು ಸಾಹಿತ್ಯದ ಜತೆ ಸಾಕ್ಷರತೆ ಚಳವಳಿ, ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ದುಡಿದವರು. 2019ರಲ್ಲಿ ಅವರ ಕಾಲನೊದ್ದವರು ನೀಳ್ಗತೆ ಪ್ರಕಟವಾಗಿದ್ದು, 2020 ರಲ್ಲಿ ಅವರ “ಅವ್ವ ಬರಲೇ ಇಲ್ಲʼ ಕವನ ಸಂಗ್ರಹ ಪ್ರಕಟವಾಗಿದೆ.

ರಂಗಕರ್ಮಿಯಾಗಿ ಬಿ.ವಿ.ಕಾರಂತರ ನಿರ್ದೇಶನದ ಹಯವದನ ನಾಟಕದ ಜೊತೆಗೆ, ಹಲವು ನಿರ್ದೇಶಕರ ನಾಟಕಗಳು ಹಾಗೂ ಸಾಕ್ಷರತೆಯ ಬೀದಿ ನಾಟಕಗಳಲ್ಲಿ ನಟಿಸಿದ್ದರು. ಮೈಸೂರಿನ ಮಂಟೇಸ್ವಾಮಿ ಪ್ರತಿಷ್ಠಾನದ ಸದಸ್ಯರಾಗಿ, “ಸಂಕುಲʼ ಸಾಂಸ್ಕೃತಿಕ ಸಂಘಟನೆಯ ಕಾರ್ಯದರ್ಶಿಯಾಗಿಯೂ ದುಡಿದಿದ್ದರು. ರಂಗಾಯಣ ಹಾಗೂ ಮಂಟೇಸ್ವಾಮಿ ಪ್ರತಿಷ್ಠಾನದ ಜತೆಗೂಡಿ ಮಂಟೇಸ್ವಾಮಿ ಜಾನಪದಮೇಳ, ರಂಗಾಯಣದೊಟ್ಟಿಗೆ ವಿಮರ್ಶೆಯ ವಿಮರ್ಶೆ, ಮೈಸೂರಿನ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಪಂಚಾಯಿತಿಯ ಆವರಣದಲ್ಲಿ “50ರ ಮಧ್ಯರಾತ್ರಿʼ ಸ್ವಾತಂತ್ರ್ಯದ ಆಚರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸಂಘಟಿಸಿದ್ದರು.

ನಿಸರ್ಗ ಟ್ರಸ್ಟ್(ರಿ) ನೈಸರ್ಗಿಕ ಆಹಾರೋತ್ಪನ್ನ ಕೇಂದ್ರದ ಅಧ್ಯಕ್ಷರಾಗಿ , ಸಾವಯವ ರೈತರ ಮಾರುಕಟ್ಟೆಗೆ ರೈತರ ಸಂತೆಯ ಆಯೋಜನೆ, ಸಾವಯವ ಆಹಾರ ಪದಾರ್ಥಗಳ ಪ್ರದರ್ಶನ ಮತ್ತು ಮಾರಾಟ ಕೇಂದ್ರಗಳ ತೆರೆಯುವಿಕೆ, ಹೊನ್ನೂರಿನಲ್ಲಿ ನಿಸರ್ಗ ಟ್ರಸ್ಟ್ ವತಿಯಿಂದ ಸಾವಯವ ರೈತರಿಗಾಗಿ ಸಾಮೂಹಿಕ ಹೈನುಗಾರಿಕೆ ಬೇಸಾಯ ಮುಂತಾದ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿದ್ದರು. ರಾಜ್ಯ ಸಂಪನ್ಮೂಲ ಕೇಂದ್ರ ಮೈಸೂರು ಇವರು ಆಯೋಜಿಸುತ್ತಿದ್ದ ಸಾಕ್ಷರತಾ ಚಳುವಳಿಗಳಲ್ಲಿ ಹಾಗೂ ಸಾಹಿತ್ಯ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದ ಅವರು “ನೀನೇ ಕಾರಣʼ, “ಸಾಕಮ್ಮನ ಕಥೆʼ, “ಸಮಾನತೆʼ, “ಹುಲಿ ಮತ್ತು ಕತ್ತೆʼ ಸೇರಿದಂತೆ ಹಲವು ಕಥಾ ಪುಸ್ತಕಗಳನ್ನು ರಚಿಸಿದ್ದಾರೆ.

ಮಾನವ ನಿರ್ಮಿತ ಅದ್ಭುತಗಳು ನವಸಾಕ್ಷರಿಗಾಗಿ ಮಾಹಿತಿ ಪುಸ್ತಕ, “ರಾಗ ಸಂಗಮʼ ವಿವಿಧ ಲೇಖಕರುಗಳ ನಾಟಕ ಸಂಗ್ರಹಿಸಿದ್ದಾರೆ. “ಸೂರಿಲ್ಲದ ರಂಗದಲಿʼ(ಮೂರು ಸಂಪುಟ) ವಿವಿಧ ಲೇಖಕರುಗಳ ನಾಟಕ ಸಂಗ್ರಹ ಸೇರಿದಂತೆ ಹಲವು ವೃತ್ತಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕಟವಾಗಿವೆ. ʼಮೊಕಾರʼ ಸಂಕಲನದ “ನೀರುʼ ಕಥೆ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹಾಗೂ ಶಿವಮೊಗ್ಗ ತೋಟಗಾರಿಕೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಪಠ್ಯವಾಗಿತ್ತು.

“ಬಾಳಾಟʼ ಕಥಾಸಂಕನದಲ್ಲಿರುವ ಮುನ್ನುಡಿಯಲ್ಲಿನ ಅವ್ವ ಪದ್ಯ ಮತ್ತು ಹಂಪಿ ಕನ್ನಡ ವಿವಿ ಪ್ರಕಟಿಸಿದ ” ನಾನೇಕೆ ಬರೆಯುತ್ತೇನೆ ʼಎನ್ನುವ ಲೇಖನ ಕಲಬುರ್ಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಎಂಎ ಕನ್ನಡ ವಿದ್ಯಾರ್ಥಿಗಳಿಗೆ ಪಠ್ಯವಾಗಿತ್ತು.

ಪ್ರಶಸ್ತಿಗಳು:

ಕುಕ್ಕರಹಳ್ಳಿ ಬಸವರಾಜು ಅವರಿಗೆ 1996 ರ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, 2003ರಲ್ಲಿ ವಿಶ್ವನಾಥ್ ಕೆ.ವಾರಂಬಳ್ಳಿ ಪ್ರತಿಷ್ಠಾನ ರಾಜ್ಯ ಪ್ರಶಸ್ತಿ, 2016ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ದೊರೆತಿದೆ. 2016 ಡಿಸೆಂಬರ್ 12ರಂದು ನಡೆದ ಮೈಸೂರು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

12 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago