ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವುದರ ಬಗ್ಗೆ ಇಂದು ಸ್ವತಃ ಕುಮಾರಸ್ವಾಮಿ ಅವರೇ ಮನಬಿಚ್ಚಿ ಮಾತನಾಡುತ್ತಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನ ಹಾಗೂ ಪಕ್ಷದ ಕಾರ್ಯಕರ್ತರು ಒಗ್ಗಡ್ಡಾಗಿ ಕಳೆದ ಎರಡು ತಿಂಗಳಿಂದಲೇ ಕುಮಾರಸ್ವಾಮಿ ಅವರೆ ಅಭ್ಯರ್ಥಿಯಾಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ ಎಂದರು.
ಕೆಲವು ದಿನಗಳ ಹಿಂದೆ ಪಕ್ಷದ ಸಭೆ ಮಾಡಿದಾಗಲು, ಕುಮಾರಣ್ಣ ಅಭ್ಯರ್ಥಿಯಾಗಬೇಕು ಇಲ್ಲ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಬೇಕು ಎಂದು ಒತ್ತಾಯ ಮಾಡಿದ್ದರು. ಈ ಹಿನ್ನಲೆ ಇಂದು ಮಂಡ್ಯ ಹಾಗೂ ಮೈಸೂರು ಜೆಡಿಎಸ್ ಮುಖಂಡರ ಸಾಭೆಯನ್ನು ಕರೆದಿದ್ದೇವೆ ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದರು.
ಪಕ್ಷದ ಕೋರ್ಕಮಿಟಿ ಸಭೆ ಬಳಿಕ ಕುಮಾರಸ್ವಾಮಿ ಅವರು ಮನಬಿಚ್ಚಿ ಮಾತನಾಡುತ್ತಾರೆ ಎಂದು ತಿಳಿಸಿದರು.
ಗೆಲ್ಲುವ ಮೊದಲ ಕ್ಷೇತ್ರ ಕೋಲಾರ !: ಕೋಲಾರ ಕ್ಷೇತ್ರದ ವಿಚಾರದಲ್ಲಿ ಯಾವುದೇ ಗೊಂದಲಗಳೇ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದಾರೆ. ಕೋಲರದ ಎಂಪಿ ಮುನಿಸ್ವಾಮಿ ಅವರೇ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಗೆಲುವಿನ ಮೊದಲ ಕ್ಷೇತ್ರವೇ ಕೋಲಾರ ಆಗುತ್ತಿದೆ. ಕೇವಲ ಮೂರು ದಿನದಲ್ಲಿ ಎಲ್ಲರ ಮನಸ್ಸು ಪರಿವರ್ಥನೆಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…