ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವುದರ ಬಗ್ಗೆ ಇಂದು ಸ್ವತಃ ಕುಮಾರಸ್ವಾಮಿ ಅವರೇ ಮನಬಿಚ್ಚಿ ಮಾತನಾಡುತ್ತಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನ ಹಾಗೂ ಪಕ್ಷದ ಕಾರ್ಯಕರ್ತರು ಒಗ್ಗಡ್ಡಾಗಿ ಕಳೆದ ಎರಡು ತಿಂಗಳಿಂದಲೇ ಕುಮಾರಸ್ವಾಮಿ ಅವರೆ ಅಭ್ಯರ್ಥಿಯಾಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ ಎಂದರು.
ಕೆಲವು ದಿನಗಳ ಹಿಂದೆ ಪಕ್ಷದ ಸಭೆ ಮಾಡಿದಾಗಲು, ಕುಮಾರಣ್ಣ ಅಭ್ಯರ್ಥಿಯಾಗಬೇಕು ಇಲ್ಲ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಬೇಕು ಎಂದು ಒತ್ತಾಯ ಮಾಡಿದ್ದರು. ಈ ಹಿನ್ನಲೆ ಇಂದು ಮಂಡ್ಯ ಹಾಗೂ ಮೈಸೂರು ಜೆಡಿಎಸ್ ಮುಖಂಡರ ಸಾಭೆಯನ್ನು ಕರೆದಿದ್ದೇವೆ ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದರು.
ಪಕ್ಷದ ಕೋರ್ಕಮಿಟಿ ಸಭೆ ಬಳಿಕ ಕುಮಾರಸ್ವಾಮಿ ಅವರು ಮನಬಿಚ್ಚಿ ಮಾತನಾಡುತ್ತಾರೆ ಎಂದು ತಿಳಿಸಿದರು.
ಗೆಲ್ಲುವ ಮೊದಲ ಕ್ಷೇತ್ರ ಕೋಲಾರ !: ಕೋಲಾರ ಕ್ಷೇತ್ರದ ವಿಚಾರದಲ್ಲಿ ಯಾವುದೇ ಗೊಂದಲಗಳೇ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದಾರೆ. ಕೋಲರದ ಎಂಪಿ ಮುನಿಸ್ವಾಮಿ ಅವರೇ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಗೆಲುವಿನ ಮೊದಲ ಕ್ಷೇತ್ರವೇ ಕೋಲಾರ ಆಗುತ್ತಿದೆ. ಕೇವಲ ಮೂರು ದಿನದಲ್ಲಿ ಎಲ್ಲರ ಮನಸ್ಸು ಪರಿವರ್ಥನೆಯಾಗಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…