ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡುತ್ತಿರುವ ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಅವರು, ಕುಮಾರಸ್ವಾಮಿಯವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿದ್ದಾರೆ.
ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಐಸಿಯುಗೆ ದಾಖಲಿಸಲಾಗಿತ್ತು. ನಂತರ ನರರೋಗ ತಜ್ಞ ಡಾ.ಪಿ.ಸತೀಶ್ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ನೀಡಲು ಆರಂಭಿಸಿತು.
ಗೋಲ್ಡನ್ ಅವರ್ ಒಳಗೆ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕುಮಾರಸ್ವಾಮಿಯವರಿಗೆ ಮಿದುಳಿನ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಚಿಕಿತ್ಸೆ ನೀಡಲಾಗಿತ್ತು. ಶೀಘ್ರಗತಿಯಲ್ಲಿ ಗುಣಮುಖರಾಗುತ್ತಿದ್ದಾರೆ. ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…