ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ನೀಡುತ್ತಿರುವ ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಅವರು, ಕುಮಾರಸ್ವಾಮಿಯವರ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿದ್ದಾರೆ.
ಅಸ್ವಸ್ಥತೆ, ಮಾತಿನ ಅಸ್ಪಷ್ಟತೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಮುಂಜಾನೆ 3:40 ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಕೂಡಲೇ ಆರೋಗ್ಯ ತಪಾಸಣೆ ನಡೆಸಿ ಐಸಿಯುಗೆ ದಾಖಲಿಸಲಾಗಿತ್ತು. ನಂತರ ನರರೋಗ ತಜ್ಞ ಡಾ.ಪಿ.ಸತೀಶ್ ಚಂದ್ರ ಮತ್ತು ಅವರ ತಂಡ ಚಿಕಿತ್ಸೆ ನೀಡಲು ಆರಂಭಿಸಿತು.
ಗೋಲ್ಡನ್ ಅವರ್ ಒಳಗೆ ಕುಮಾರಸ್ವಾಮಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕುಮಾರಸ್ವಾಮಿಯವರಿಗೆ ಮಿದುಳಿನ ಬಲಭಾಗದಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಚಿಕಿತ್ಸೆ ನೀಡಲಾಗಿತ್ತು. ಶೀಘ್ರಗತಿಯಲ್ಲಿ ಗುಣಮುಖರಾಗುತ್ತಿದ್ದಾರೆ. ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…